ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

Public TV
1 Min Read

ಬೆಳಗಾವಿ: ಸುಪ್ರೀಂ ಕೋರ್ಟ್‌ (Suprme Court) ಸೂಚನೆಯಂತೆ ಶುಕ್ರವಾರ ನ್ಯಾಯಾಲಯಕ್ಕೆ (Court) ಶರಣಾಗುವುದಾಗಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಹೇಳಿದ್ದಾರೆ.

ಇಂದು ವಿನಯ್ ಕುಲಕರ್ಣಿ ಬೆಳಗಾವಿಯ ಪ್ರವಾಸಿ ಮಂದಿರಲ್ಲಿ ಧಾರವಾಡ ಜಿಲ್ಲೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಅಚ್ಚರಿ ಎಂಬಂತೆ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಜರಾಗಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ – ಸಿದ್ದರಾಮಯ್ಯ

 

ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾರಣಕ್ಕೆ ಇಲ್ಲಿ ಸಭೆ ಮಾಡುತ್ತಿದ್ದೇನೆ. ಅಧಿಕಾರಿಗಳು ನನ್ನ ಪತ್ನಿಗೆ ಸಾಥ್ ನೀಡಿ ಎಂದು ಮನವಿ ಮಾಡಿಕೊಂಡರು.

ಕ್ಷೇತ್ರದ ಜನರು ಯಾರು ಆತಂಕ ಪಡಬೇಕಿಲ್ಲ. ಇನ್ನು ಮುಂದೆ ಕ್ಷೇತ್ರವನ್ನು ನನ್ನ ಪತ್ನಿ ಮಗಳು ನೋಡಿಕೊಳ್ಳುತ್ತಾರೆ. ಅವರಿಗೆ ನಿಮ್ಮ ಸಹಕಾರ ನೀಡಬೇಕು. ಬುಧವಾರ ಕಿತ್ತೂರಿನಲ್ಲಿ ಸಭೆ ಮಾಡಿದ ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದು ತಿಳಿಸಿದರು.

Share This Article