IAS ಅಧಿಕಾರಿ ಅನುರಾಗ್ ತಿವಾರಿ ಸಾವು ಕೇಸ್ – ಸಹಜ ಸಾವು ಎಂದ ಸಿಬಿಐ ವರದಿ ತಿರಸ್ಕೃತ

Public TV
2 Min Read

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (IAS officer Anurag Tiwari) ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ತಿವಾರಿ ಅವರ ಸಾವು ಸಹಜ ಎಂದು ನೀಡಿದ್ದ ಸಿಬಿಐ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ (CBI special court) ತಿರಸ್ಕರಿಸಿದ್ದು, ಮರು ತನಿಖೆಗೆ (Re-investigation) ಆದೇಶಿಸಿದೆ.

ಅನುರಾಗ್ ಕುಟುಂಬಸ್ಥರ ದೂರಿನನ್ವಯ ಮರು ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಿಂದ ಸಿಬಿಐಗೆ (CBI) ಭಾರೀ ಹಿನ್ನಡೆಯಾಗಿದೆ. ಇದೇ ಅಕ್ಟೋಬರ್ 22ರಂದು ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ತಿವಾರಿ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ, ನನಗೂ ಜೀವ ಬೆದರಿಕೆ ಇತ್ತು: ನಿವೃತ್ತ ಅಧಿಕಾರಿ ವಿಜಯಕುಮಾರ್

Law

2007ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಮೃತದೇಹ 2017ರಲ್ಲಿ ಲಖನೌದ (Lucknow) ಹಜರತ್ ಗಂಜ್ ಗೆಸ್ಟ್ ಹೌಸ್‍ನಲ್ಲಿ (Hazrat Ganj Guest House) ಪತ್ತೆಯಾಗಿತ್ತು. ಆಗ ತಿವಾರಿ ರಾಜ್ಯದ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದರು. ಅನ್ನಭಾಗ್ಯ ಅಕ್ಕಿ ಹಗರಣದ ಬಗ್ಗೆ ತನಿಖೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಸಜ್ಜಾಗಿದ್ದರು. ಸದ್ಯ ಸಾವಿಗೂ ಕೆಲ ದಿನಗಳ ಹಿಂದೆ ಸಹೋದರ ಮಯಾಂಕ್‍ಗೆ, ಕರ್ನಾಟಕ ಸರ್ಕಾರದಲ್ಲಿ ದಕ್ಷ ಐಎಎಸ್ ಅಧಿಕಾರಿಗಳಿಗೆ ಕೆಲಸ ಮಾಡಲು ಆಗುತ್ತಿಲ್ಲ. ನನಗೂ ಸಹ ಜೀವ ಭಯವಿದೆ. ಆದಷ್ಟು ಬೇಗ ಮರಳಿ ಉತ್ತರಪ್ರದೇಶಕ್ಕೆ ಬರುವುದಾಗಿ ಮೆಸೇಜ್ ಮಾಡಿದ್ದರು. ಇದನ್ನೂ ಓದಿ: ಅನ್ನಭಾಗ್ಯ ಅಕ್ರಮ: 34 ಲಕ್ಷ ಕೆಜಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟ – ಅನುರಾಗ್ ತಿವಾರಿ ಬಲಿ ಪಡೀತಾ ಹಗರಣ?

ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರ ಶವ ಉತ್ತರಪ್ರದೇಶದ ಹಜರತ್‍ಗಂಜ್‍ನಲ್ಲಿ ಮೇ 17ರಂದು ಪತ್ತೆಯಾಗಿತ್ತು. ಅನುರಾಗ್ ತಿವಾರಿ ಅವರ ಜನ್ಮದಿನದಂದೇ ಇಲ್ಲಿನ ಮೀರಾ ಬಾಯಿ ಗೆಸ್ಟ್‍ಹೌಸ್ ಬಳಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. 2007ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಉತ್ತರಪ್ರದೇಶದ ಬಾಹ್ರಿಯಾಚ್‍ನಲ್ಲಿ ನೆಲೆಸಿದ್ದು, ಸಾವಿಗೂ ಎರಡು ದಿನಗಳಿಂದ ಮೀರಾಬಾಯಿ ಗೆಸ್ಟ್ ಹೌಸ್‍ನಲ್ಲಿ ತಂಗಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *