ಅನುದಾನ ಬಿಡುಗಡೆ ಮಾಡದಿದ್ರೆ ರಾಜಕೀಯ ನಿವೃತ್ತಿ, ಯಾವ ಪಕ್ಷಕ್ಕೂ ಹೋಗಲ್ಲ: ಶಾಸಕ ಸತೀಶ್ ಸೈಲ್

Public TV
1 Min Read

ಕಾರವಾರ: ಮಾರ್ಚ್‌ನಲ್ಲಿ ಮುಖ್ಯಮಂತ್ರಿಗಳು ಅನುದಾನ ಕೊಡದಿದ್ರೆ ರಾಜಕೀಯ ನಿವೃತ್ತಿಯಾಗುವುದಾಗಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ Satish Sail) ಘೋಷಿಸಿದ್ದಾರೆ.

ಕಾರವಾರದ (Karar ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಮೂರು ವರ್ಷದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಾ ಬಂದಿದ್ದೇನೆ. ಮೂರು ವರ್ಷದಿಂದ ಅನುದಾನ ಬಿಡುಗಡೆ ಆಗಿಲ್ಲ, ಘೋಷಣೆಯೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

ಚಿಕಿತ್ಸೆಗಾಗಿ ಜನ ಗೋವಾಕ್ಕೆ ಹೋಗಬೇಕು. ನಾನೇ ನನ್ನ ಚಿಕಿತ್ಸೆಗಾಗಿ ದೆಹಲಿಗೆ ಹೋಗುವಂತೆ ಆಗಿದೆ. ಹೀಗಾಗಿ, ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತುಂಬಾ ಅವಶ್ಯವಿದೆ. ಜನ ತೊಂದರೆಯಲ್ಲಿ ಇದ್ದಾರೆ. ನಾನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಸಿದ್ಧ ಎಂದು ಶಪಥ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಆಗಬೇಕು. ಆಗದೇ ಇದ್ದರೆ ನಾನು ಪಕ್ಷ ಬಿಟ್ಟು ಹೋಗಲ್ಲ. ರಾಜೀನಾಮೆ ಕೊಟ್ಟು ಮನೆಯಲ್ಲಿ ಇರ್ತೀನಿ. ರಾಜಕೀಯ ನಿವೃತ್ತಿ ತೆಗೆದುಕೊಳ್ತೇನೆ. ಆಸ್ಪತ್ರೆಗೆ ಅನುದಾನ ಬಿಡುಗಡೆ ಆಗಬೇಕು. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿಕೊಡುವಂತೆ ಸಿಎಂಗೆ ಕೇಳಿಕೊಂಡಿದ್ದೆ. ಹಿಂದೆ ಅನುದಾನ ಕೊಡಲಿಲ್ಲ. ಮೂರು ವರ್ಷದಿಂದ ಈ ಬಗ್ಗೆ ಮನವಿ ಮಾಡಿದ್ದೇನೆ. ಈ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಆಗದಿದ್ರೆ ಬಜೆಟ್ ಆದ ಮಾರನೇ ದಿವಸ ಸತೀಶ್ ಬಜೆಟ್ ಮನೆಯಲ್ಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್‌ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

ಯಾವ ಪಕ್ಷಕ್ಕೂ ಹೋಗುವುದಿಲ್ಲ. ಯಾವ ಕೆಲಸವನ್ನೂ ಮಾಡುವುದಿಲ್ಲ. ಐ ಯಾಮ್ ಎ ನಾಟ್ ಫಿಟ್ ಫಾರ್ ಪೀಪಲ್ ಅಂತ ತಿಳಿದುಕೊಳ್ಳುತ್ತೇನೆ. ಅನುದಾನ ಬಿಡುಗಡೆಯಾಗದಿದ್ದರೆ ರಾಜಕೀಯ ನಿವೃತ್ತಿ ಘೋಷಿಸಿ ರಾಜಕೀಯದಿಂದ ದೂರ ಇರುತ್ತೇನೆಂದು ಹೇಳಿದ್ದಾರೆ.

Share This Article