ನಾನು ಚುನಾವಣೆಯಲ್ಲಿ ಸೋತ್ರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕೆ ಇರ್ತೀನಿ: ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ

Public TV
1 Min Read

ತುಮಕೂರು: ಮುಂದಿನ ಚುನಾವಣೆಯಲ್ಲಿ ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ. ವೀರಭದ್ರಯ್ಯ ಸೋತರೆ ನಮ್ಮ ಮನೆಯಲ್ಲಿ ಜೀತಕ್ಕಿರ್ತಾರಾ ಎಂದು ತುಮಕೂರು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಬಹಿರಂಗ ಸವಾಲು ಹಾಕಿದ್ದಾರೆ.

ಈ ರೀತಿಯ ಸವಾಲು ಮಾಡಲು ಜನರ ಶಕ್ತಿಯೇ ನನಗೆ ಪ್ರೇರಣೆಯಾಗಿದೆ. ಡಿಸಿಸಿ ಬ್ಯಾಂಕ್ ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಂದು ವೇಳೆ ಆರೋಪಗಳೆಲ್ಲಾ ಸಾಬೀತಾದರೇ ನಾನು ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಅಂತಾ ಅಂದ್ರು.

2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆ.ಎನ್.ರಾಜಣ್ಣ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದ ವೀರಭದ್ರಯ್ಯ ವಿರುದ್ಧ 15 ಸಾವಿರ ಮತಗಳ ಅಂತರದಿಂದ ಗೆಲುವನ್ನು ಪಡೆದುಕೊಂಡಿದ್ದರು. ಈ ಬಾರಿಯು ವೀರಭದ್ರಯ್ಯನವರು ಕೆ.ಎನ್.ರಾಜಣ್ಣವರಿಗೆ ಪ್ರಬಲ ಎದುರಾಳಿ ಆಗಿದ್ದಾರೆ. ಇನ್ನೇನು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷದ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ

Share This Article
Leave a Comment

Leave a Reply

Your email address will not be published. Required fields are marked *