ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ: ಜನಾರ್ದನ ರೆಡ್ಡಿ ಹೊಸ ಬಾಂಬ್

Public TV
1 Min Read

ಬಳ್ಳಾರಿ: ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು. ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದು ಶಾಂಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದ್ದಾರೆ. ಸೋಮಶೇಖರ್ ರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷರಿಂದ ಇದೀಗ ಶಾಸಕರಾಗಿ ಕೆಲಸ ಮಾಡ್ತಿದ್ದಾರೆ. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟಿದ್ದಾರೆ. ಇಷ್ಟಾದ್ರೂ ನಾನಿಂದು ನಿಮ್ಮ ಮುಂದೆ ಬಂದು ನಿಲ್ಲಲು ಬಳ್ಳಾರಿ ಕನಕದುರ್ಗಮ್ಮ ದೇವಿ ವಿಶೇಷ ಆಶೀರ್ವಾದ ನೀಡಿದ್ದಾಳೆ ಎಂದು ದೇವರನ್ನು ನೆನೆದಿದ್ದಾರೆ. ಇದನ್ನೂ ಓದಿ: ನಾನ್ ವೆಜ್ ಪ್ರಿಯರು ಮರೆಯಲಾಗದ ಹೊಸ ರುಚಿ ‘ಸಿಗಡಿ ಪಲ್ಯ’ – ಟ್ರೈ ಮಾಡಿ

ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ. ಅಷ್ಟು ತೊಂದರೆ ನನಗೆ ನೀಡಿದ್ದಾರೆ. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ ಎಂದು ಸಿಬಿಐನವರೇ ನನಗೆ ಹೇಳಿದ್ರು. ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ತಿಳಿಸಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *