ನೂತನ ಶಾಸಕರು ದಬ್ಬಾಳಿಕೆ ನಡೆಸಿದ್ರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯಿರಿ- ಕಾಂಗ್ರೆಸ್ ಪರಾಜಿತ ಅಭ್ಯರ್ಥಿ

Public TV
1 Min Read

ಮೈಸೂರು: ನೂತನ ಶಾಸಕರು ದಬ್ಬಾಳಿಕೆ ನಡೆಸಿದರೆ ಹುಚ್ಚು ನಾಯಿಗೆ ಹೊಡೆಯುವಂತೆ ಹೊಡೆಯಿರಿ ಅಂತ ಪಿರಿಯಾಪಟ್ಟಣದ ಕಾಂಗ್ರೆಸ್‍ನ ಪರಾಜಿತ ಅಭ್ಯರ್ಥಿ ಕೆ. ವೆಂಕಟೇಶ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ನಗರದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವೆಂಕಟೇಶ್, ನೂತನ ಶಾಸಕರು ದಬ್ಬಾಳಿಕೆ ನಡೆಸಲು ಬಿಡಬೇಡಿ. ಒಂದು ವೇಳೆ ದಬ್ಬಾಳಿಕೆ ನಡೆಸಿದ್ರೆ ಅವರಿಗೆ ಹುಚ್ಚು ನಾಯಿಗೆ ಹೊಡೆಯುವಂತೆ ಹೊಡೆಯಿರಿ. ನಾನು ನಿಮಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆ. ಜೆಡಿಎಸ್ ಪಕ್ಷದ ನೂತನ ಶಾಸಕರಾಗಿ ಆಯ್ಕೆಗೊಂಡಿರುವ ಕೆ. ಮಹದೇವು ಅವರ ವಿರುದ್ಧ ವೆಂಕಟೇಶ್ ಅವರು ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ನನ್ನ ಜೊತೆಯಲ್ಲಿ ಇದ್ದವರೇ ನನಗೆ ವಿಶ್ವಾಸಘಾತುಕರಾಗಿ ಬೆನ್ನಿಗೆ ಚೂರಿ ಹಾಕಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬೇಗನೆ ಮಂಧ್ಯತರ ಚುನಾವಣೆ ನಡೆಯುತ್ತದೆಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ ನನಗೆ ಸದ್ಯದ ಚುನಾವಣೆ ಎದುರಿಸುವ ಶಕ್ತಿಯಿಲ್ಲವೆಂದು ಹೇಳಿದ್ದಾರೆ.

ಕೆ. ವೆಂಕಟೇಶ್‍ರವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಾಗಿದ್ದರು. ಪಿರಿಯಾಪಟ್ಟಣ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಕೆ. ಮಹದೇವು ಅವರ ವಿರುದ್ಧ ಪರಾಜಿತಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *