ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಹುಲ್ ಗಾಂಧಿಯೇ ಹೊಣೆ: ಕೇಜ್ರಿವಾಲ್ ಕಿಡಿ

Public TV
1 Min Read

– ಪ್ರಧಾನಿ ಸ್ಥಾನದಿಂದ ಮೋದಿಯನ್ನ ಕೆಳಗಿಳಿಸುವುದೇ ನಮ್ಮ ಉದ್ದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಹೊಣೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಇಂದು ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯು ದೇಶ ಹಾಗೂ ಸಂವಿಧಾನ ರಕ್ಷಿಸಲು ಇದೆ. ನಾವು ಮೊದಲು ಭಾರತೀಯರು, ನಂತರ ಹಿಂದೂ ಹಾಗೂ ಮುಸ್ಲಿಂ ಎಂದು ಹೇಳಿದರು.

ನಮ್ಮ ಗುರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ಹಾಗೂ ಅಮಿತ್ ಶಾರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದಾಗಿದೆ. ಈ ನಿಟ್ಟಿನಲ್ಲಿ ನಾವು ಏನು ಬೇಕಾದರೂ ಮಾಡಲು ಸಿದ್ಧರಿದ್ದೇವೆ. ಯಾವುದೇ ಮಹಾಮೈತ್ರಿ ಇದ್ದರೂ ಅದಕ್ಕೆ ನಮ್ಮ ಬೆಂಬಲ ಇರುತ್ತದೆ. ಬಿಜೆಪಿಯು ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಹಾಗೂ ಎಎಪಿ ಮೈತ್ರಿ ವಿಫಲವಾಗಿದ್ದಕ್ಕೆ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಟ್ವಿಟ್ಟರ್ ನಲ್ಲಿ ಯಾವ ಮೈತ್ರಿಯ ಬಗ್ಗೆ ಚರ್ಚೆಯಾಗಿತ್ತು ಅಂತ ರಾಹುಲ್ ಗಾಂಧಿ ಅವರಿಗೆ ಕೇಳ ಬಯಸುತ್ತೇನೆ ಎಂದು ಅಸಮಾಧಾನ ಹೊರ ಹಾಕಿದರು.

ಎಎಪಿಯು ಕಾಂಗ್ರೆಸ್ ಜೊತೆಗೆ ಮೈತ್ರಿ ಸಾಧಿಸಲು ಮುಂದಾಗಿತ್ತು. ಆದರೆ ಇದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಲಿಲ್ಲ. ಕೊನೆಯ ಕ್ಷಣದಲ್ಲಿ ಮೈತ್ರಿ ಮಾತುಕತೆ ಮುರಿದು ಬಿತ್ತು ಎಂದು ಹೇಳಿ ಕೇಜ್ರಿವಾಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *