SDPI ನವರು ಪಾಕಿಸ್ತಾನಕ್ಕೆ ಹೋಗಲಿ – ಶಾಸಕ ಬೋಪಯ್ಯ ಕಿಡಿ

Public TV
1 Min Read

ಮಡಿಕೇರಿ: ಹಿಂದೂ ನೆಲದ ಸಂಸ್ಕೃತಿಗೆ ಬೆಲೆ ಕೊಡದೇ ಇದ್ದರೇ SDPI ನವರು ಪಾಕಿಸ್ತಾನಕ್ಕೆ ಹೋಗಲಿ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಕಿಡಿ ಕಾರಿದ್ದಾರೆ.

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಂತಹ ಕೃತ್ಯ ಮಾಡುವವರಿಗೆ ದೇಶದ್ರೋಹ ಅಥವಾ ಗೂಂಡಾ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಬೇಕು. ಇಲ್ಲದೇ ಇದ್ದರೆ ಅಂತಹವರನ್ನು ಮಟ್ಟ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಪಾಶಾ ಬಸು ಪ್ರೆಗ್ನೆಂಟ್, ಸೋಷಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ನಟಿ

1947ರಲ್ಲಿ ದೇಶ ವಿಭಜನೆ ಮಾಡುವಾಗ ಹಿಂದೂಗಳಿಗೆ ಹಿಂದೂಸ್ಥಾನ, ಮುಸ್ಲಿಮರಿಗೆ ಪಾಕಿಸ್ತಾನ ನೀಡಿಲ್ಲವೇ? ಸಾವರ್ಕರ್ ಫೋಟೊ ತೆಗೆಯುವುದಕ್ಕೆ ಎಸ್‌ಡಿಪಿಐ ನವರು ಯಾರು? ಟಿಪ್ಪು ಸ್ವಾತಂತ್ರ‍್ಯ ಹೋರಾಟಗಾರ ಅಲ್ಲ ಒಬ್ಬ ರಾಜ ಅಷ್ಟೇ. ಎಂದು ನ್ಯಾಯಾಲಯವೇ ಹೇಳಿದೆ. ಆದರೆ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅಂಡಮಾನ್ ಜೈಲಿನಲ್ಲಿದ್ದರು. ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದ್ದರು. ಅವರ ಫೋಟೋವನ್ನು ತೆರವು ಮಾಡಿದ್ದು ತಪ್ಪು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಿಯೋ ಬಿಡುಗಡೆ ಮಾಡಲಿದೆ ಕಡಿಮೆ ಬೆಲೆಯ 5G ಫೋನ್‌ – ಬೆಲೆ ಎಷ್ಟು? ಗುಣ ವೈಶಿಷ್ಟ್ಯಗಳು ಏನು?

ಈ ದೇಶದ ಸಂಸ್ಕೃತಿಗೆ ಬೆಲೆ ಕೊಡದೇ ಇದ್ದವರು ಇಲ್ಲಿಂದ ಪಾಕಿಸ್ತಾನಕ್ಕೆ ಹೋಗಬಹುದು. ಗೃಹ ಇಲಾಖೆಯೂ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬೋಪಯ್ಯ ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *