ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ: ಶ್ರೀರಾಮುಲು

Public TV
1 Min Read

ಬೆಂಗಳೂರು: ನಟ ಕಿಚ್ಚ ಸುದೀಪ್ (Kichcha Sudeep) ಬಿಜೆಪಿ ಪಕ್ಷಕ್ಕೆ ಬಂದರೆ ಲಾಭ ಆಗುತ್ತೆ ಎಂದು ಸಚಿವ ಶ್ರೀರಾಮುಲು (B. Sriramulu) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಪಕ್ಷಕ್ಕೆ ಬರ್ತಾರೆ ಅನ್ನೋದು ಗೊತ್ತಿಲ್ಲ. ನಾನೂ ಮಾಧ್ಯಮಗಳಲ್ಲಿ ನೋಡಿದ್ದು, ಇದನ್ನು ತಿಳಿದುಕೊಂಡು ಮಾತಾಡ್ತೇನೆ. ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ. ಸುದೀಪ್ ಪಕ್ಷಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದರು. ಇದನ್ನೂ ಓದಿ: ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಲೀಕ್ ಬೆದರಿಕೆ ಪತ್ರ : ದೂರು ದಾಖಲು

ಕಿಚ್ಚ ಸುದೀಪ್ ಇಂದು ಬಿಜೆಪಿ (BJP) ಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

ಈ ಕುರಿತು ಸುದೀಪ್ ಯಾವುದೇ ಹೇಳಿಕೆಯನ್ನು ನೀಡದೇ ಇದ್ದರೂ, ಸುದೀಪ್ ಅವರ ಆಪ್ತರು ಹೇಳುವ ಪ್ರಕಾರ ಕಿಚ್ಚ ಬಿಜೆಪಿಗೆ ಬರುವುದು ಕನ್ಫರ್ಮ್. ಆದರೆ, ಸ್ಟಾರ್ ಪ್ರಚಾರಕರಾಗಿ ಬರಲಿದ್ದಾರಾ ಅಥವಾ ಅಧಿಕೃತವಾಗಿ ಪಕ್ಷವನ್ನು ಸೇರುತ್ತಿದ್ದಾರೆ ಎನ್ನುವ ಗೊಂದಲವಿದೆ. ಈ ಗೊಂದಲಕ್ಕೆ ಮಧ್ಯಾಹ್ನ ತೆರೆಬೀಳಲಿದೆ.

Share This Article