ಸ್ಯಾಂಡಲ್‍ವುಡ್ ನಟ ಕರೆದರೆ ಈಗಲೇ ಕನ್ನಡ ಸಿನಿಮಾ ಮಾಡ್ತೀನಿ ಅಂದ್ರು ನಾಗಾರ್ಜುನ್!

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕರೆದರೆ ಈಗಲೇ ನಾನು ಕನ್ನಡ ಸಿನಿಮಾ ಮಾಡುತ್ತೀನಿ ಎಂದು ತೆಲುಗಿನ ಸೂಪರ್ ಸ್ಟಾರ್ ನಾಗಾರ್ಜುನ್ ಹೇಳಿದ್ದಾರೆ.

ಗುರುವಾರ ಮಾರತಹಳ್ಳಿಯಲ್ಲಿ ಆರಂಭವಾದ ಮಳಿಗೆಯೊಂದರ ಉದ್ಘಾಟನೆ ಸಮಾರಂಭಕ್ಕೆ ನಾಗಾರ್ಜುನ್ ಹಾಗೂ ಶಿವರಾಜ್‍ಕುಮಾರ್ ಆಗಮಿಸಿದ್ದರು. ಇಬ್ಬರು ಒಟ್ಟಿಗೆ ಸಿನಿಮಾ ಮಾಡೋ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂಬುವುದು ಕಾರ್ಯಕ್ರಮದಲ್ಲಿ ಗೊತ್ತಾಗಿದೆ.

ಶಿವಣ್ಣ ಕರೆದರೆ ತಕ್ಷಣ ಬಂದು ಬಿಡ್ತೀನಿ. ಒಂದು ಅದ್ಭುತವಾದ ಕಥೆ ಸಿಕ್ಕರೆ ಖಂಡಿತಾ ಅವರ ಜೊತೆ ಸಿನಿಮಾ ಮಾಡುತ್ತೇನೆ. ಅದರಲ್ಲೂ ಶಿವಣ್ಣ ಅವರ ಜೊತೆಯಲ್ಲಿ ಅಂದರೆ ಈಗ ಕರೆದರೂ ನಾನು ನಟಿಸುತ್ತೇನೆ. ಡಾ. ರಾಜ್‍ಕುಮಾರ್ ಅವರ ಆ್ಯಕ್ಟಿಂಗ್ ನೋಡಿದ್ದೇನೆ. ಅಲ್ಲದೇ ನನ್ನ ಅಭಿನಯ ನೋಡಿ ಮೆಚ್ಚಿಕೊಂಡು ಫೋನ್ ಕೂಡ ಮಾಡಿದ್ದರು. ಎಂದು ನಾಗಾರ್ಜುನ್ ತಿಳಿಸಿದ್ದಾರೆ.

ಇದೇ ವೇಳೆ ಶಿವಣ್ಣ ಕೂಡ ಮಾತನಾಡಿ, ನಾಗರ್ಜುನ್ ಅವರ ಜೊತೆ ಸಿನಿಮಾ ಮಾಡಬೇಕೆಂದರೆ ಒಂದು ಒಳ್ಳೆಯ ಸ್ಕ್ರಿಪ್ಟ್ ಬೇಕು. ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತಾ ನಾವಿಬ್ಬರು ಒಟ್ಟಿಗೆ ನಟಿಸುತ್ತೇವೆ. ಅಲ್ಲದೇ ಕನ್ನಡ ಹಾಗೂ ತೆಲುಗು ಎರಡರಲ್ಲೂ ಸಿನಿಮಾ ಮಾಡಬಹುದು ಎಂದು ಹೇಳಿದ್ದಾರೆ.

ನಾಗಾರ್ಜುನ್ ಇದುವರೆಗೂ ಸುಮಾರು 90ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದು, ಆದರೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಹಾಗೆಯೇ ಶಿವಣ್ಣ ಕೂಡ 2017ರಲ್ಲಿ ಬಾಲಕೃಷ್ಣ ಅವರು ನಟಿಸಿದ ‘ಗೌತಮಿಪುತ್ರ ಶಾತಕರ್ಣಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಿದ್ದರು. ಅದು ಬಿಟ್ಟು ತೆಲುಗಿನಲ್ಲಿ ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ನಟಿಸಿಲ್ಲ.

1986ರಲ್ಲಿ ಶಿವಣ್ಣ ‘ಆನಂದ್’ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಅದೇ ವರ್ಷ ನಾಗಾರ್ಜುನ್ ಕೂಡ ‘ವಿಕ್ರಂ’ ಚಿತ್ರದ ಮೂಲಕ ಟಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ಈ ಇಬ್ಬರು ನಟರು 32 ವರ್ಷದಿಂದ ಸ್ಯಾಂಡಲ್‍ವುಡ್ ಹಾಗೂ ಟಾಲಿವುಡ್‍ನಲ್ಲಿ ಖ್ಯಾತಿ ಪಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *