ಸುಪ್ರೀಂಗಿಂತ ದೊಡ್ಡವನು ನಾನಲ್ಲ, ನಾನು ಯಾರಿಗೂ ಸವಾಲ್ ಹಾಕಿಲ್ಲ: ಸ್ಪೀಕರ್

Public TV
1 Min Read

ಕೋಲಾರ: ಮೈತ್ರಿ ಪಕ್ಷದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರು, ನಾನು ಯಾರಿಗೂ ಸವಾಲ್ ಹಾಕಿಲ್ಲ, ಸುಪ್ರೀಂ ಕೋರ್ಟಿಗಿಂತ ದೊಡ್ಡವನು ನಾನಲ್ಲ ಎಂದಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅತೃಪ್ತರ ರಾಜೀನಾಮೆ ಅಂಗೀಕಾರ ಮಾಡುವ ಬಗ್ಗೆ ವಾದ ಪ್ರತಿವಾದಗಳು ನಡೆದಿದೆ. ಈ ಸಂಬಂಧ ತೀರ್ಪನ್ನು ನಾಳೆ ನೀಡುವುದಾಗಿ ಕೋರ್ಟ್ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು, ನಾಳೆಯ ಕೋರ್ಟ್ ತೀರ್ಪು ನೋಡಿದ ಬಳಿಕ ಪ್ರತಿಕ್ರಿಯೆ ನೀಡುವೆ. ಸುಪ್ರೀಂ ಕೋರ್ಟ್ ಗಿಂತ ದೊಡ್ಡವನು ನಾನಲ್ಲ. ಇವತ್ತು ವಾದ ವಿವಾದ ನಡೆದಿದೆ. ಅದರ ಬಗ್ಗೆ ಅಂತಿಮ ತೀರ್ಮಾನ ಬರುವವರೆಗೂ ಮಾತನಾಡಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿ ನಾನು ನಿರ್ವಹಣೆ ಮಾಡುತ್ತಿದ್ದೇನೆ. ಯಾರಿಗೂ ನಾನು ಸವಾಲ್ ಹಾಕಿಲ್ಲ ಎಂದರು.

ನಾನು ಯಾರ ಜೊತೆಗೂ ಜಿದ್ದಾ ಜಿದ್ದಿ ಮಾಡಿಲ್ಲ. ನನ್ನ ಧ್ವನಿಯೇ ಸ್ಪಲ್ಪ ಜೋರಾಗಿದೆ. ನಮ್ಮಪ್ಪನಿಗೂ ಸ್ವಲ್ಪ ಗಂಟಲು ದೊಡ್ಡದಾಗಿತ್ತು ಹಾಗಾಗಿ ನಾನು ಹಾಗೆ ಮಾತನಾಡುತ್ತೇನೆ. ಇದು ಸುಪ್ರೀಂ ಕೋರ್ಟ್ ಹಾಗೂ ನನ್ನ ನಡುವಿನ ಸಂಘರ್ಷ ಅಲ್ಲ. ನಿಮ್ಮ ಭಾಷೆಯಲ್ಲಿ ನೀವು ಏನಾದರೂ ಮಾತನಾಡಿಕೊಳ್ಳಿ. ನಿಮಗೆ ಪತ್ರಿಕಾ ಸ್ವಾತಂತ್ರ್ಯವಿದೆ ಎಂದು ಮಾಧ್ಯಮಗಳಿಗೆ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *