ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

Public TV
1 Min Read

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಎಸ್‍ಐಟಿ ಬಂಧಿಸಿದೆ.

ಐಎಂಎ ಹಗರಣದ ಸಂಬಂಧ ಈಗಾಗಲೇ ಬಂಧನದಲ್ಲಿರುವ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ತಂಡವು ವಿಜಯ್ ಶಂಕರ್ ಅವರನ್ನು ಬಂಧಿಸಿದೆ.

ಸೋಮವಾರ ಬೆಳಗ್ಗೆ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಅಷ್ಟೇ ಅಲ್ಲದೆ ಬಿಲ್ಡರ್ ಕೃಷ್ಣಮೂರ್ತಿ ಅವರನ್ನು ಕೂಡ ಎಸ್‍ಐಟಿ ತಂಡವು ವಿಚಾರಣೆ ನಡೆಸಿದೆ.

ಈ ಪ್ರಕರಣದ ಸಂಬಂಧ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ಎಲ್.ಸಿ.ನಾಗರಾಜ್ ಅವರನ್ನು ಶನಿವಾರ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿನ ಪ್ರಧಾನ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಅವರ ಮುಂದೆ ಹಾಜರಿಪಡಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 12ರವರೆಗೆ ನಾಗರಾಜ್‍ರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *