ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
3.7 ರಿಂದ 4.2 ಅಡಿ ಎತ್ತರ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.19) ಸಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಸಣ್ಣ ಮತ್ತು ಮಧ್ಯಮ ದೋಣಿಗಳು ಸಮುದ್ರಕ್ಕಿಳಿಸದಂತೆ ಎಚ್ಚರಿಕೆ ನೀಡಲಾಗಿದೆ. ಕಾರವಾರದ ಮಾಜಾಳಿ ಗಡಿಯಿಂದ ಭಟ್ಕಳದ ಸಮುದ್ರ ತೀರದ ವರೆಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ
ಜೂ.1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿರ್ಬಂಧ ವಿಧಿಸಿದ್ದ ಜಿಲ್ಲಾಡಳಿತ, ಸಂಪ್ರದಾಯಿಕ ಮೀನುಗಾರಿಕೆ ಮಾಡುವವರಿಗೆ ಮಾತ್ರ ಅವಕಾಶ ನೀಡಿತ್ತು. ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನಲೆಯಲ್ಲಿ ಸಂಪ್ರದಾಯಿಕ ಮೀನುಗಾರರಿಗೆ ಹಾಗೂ ಸಮುದ್ರಕ್ಕಿಳಿಯುವ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ