ಶೀಘ್ರವೇ ಕಾಂಗ್ರೆಸ್‍ಗೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು: ಶಶಿ ತರೂರ್

Public TV
1 Min Read

ನವದೆಹಲಿ: ಈಗ ಮಧ್ಯಂತರ ಹಂತದಲ್ಲಿರುವ ಪಕ್ಷವನ್ನು ಮುನ್ನಡೆಸಲು ಶೀಘ್ರ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಶಶಿ ತರೂರ್ ಹೇಳಿದ್ದಾರೆ.

ಮೂವಾಟ್ಟುಪುಳಾ ಶಾಸಕ ಮ್ಯಾಥ್ಯೂ ಕುಜಲ್ನಾಡನ್ ಕಚೇರಿ ಉದ್ಘಾಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ಸೋನಿಯಾ ಗಾಂಧಿ ಅವರು ಹಲವು ವರ್ಷಗಳಿಂದ ತಮ್ಮ ಕರ್ತವ್ಯದಿಂದ ಬಿಡುಗಡೆ ಹೊಂದಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳಲು ಬಯಸಿದರೆ, ಅದು ಶೀಘ್ರವಾಗಿ ಆಗಬೇಕು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕಾದರೆ ಈ ಕೆಲಸಗಳು ಬೇಗನೆ ಆಗಬೇಕು. ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಎಲ್ಲಾ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಶಶಿ ತರೂರ್ ತಿಳಿಸಿದ್ದಾರೆ. ಇದನ್ನೂ ಓದಿ: ತಂಗಿಯನ್ನು ಗಂಡನ ಮನೆ ಸೇರಿಸೋ ಮುನ್ನವೇ ಮಸಣ ಸೇರಿತು ಕುಟುಂಬ!

ನಾವೆಲ್ಲರೂ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಇಷ್ಟಪಟ್ಟೆವು. ಆದರೆ ನಾವು ಈಗ ಮಧ್ಯಂತರ ಹಂತದಲ್ಲಿದ್ದೇವೆ. ಕಳೆದ ಎರಡು ವರ್ಷಗಳಿಂದ ನಾವು ಖಾಯಂ ಅಧ್ಯಕ್ಷರನ್ನು ಹೊಂದಿಲ್ಲ. ಅದನ್ನು ಸರಿಪಡಿಸಬೇಕು. ಕಾಂಗ್ರೆಸ್ ಸಂಘಟನೆಯಲ್ಲಿ ನಾವು ಶಕ್ತಿಯನ್ನು ತುಂಬಬೇಕು. ನಾವೆಲ್ಲರೂ ಪಕ್ಷಕ್ಕೆ ಖಾಯಂ ಅಧ್ಯಕ್ಷರನ್ನು ಬಯಸಿದ್ದೇವೆ, ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *