ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್‌ ಖಾನ್‌

Public TV
1 Min Read

ಇಸ್ಲಾಮಾಬಾದ್: ವಿಶ್ವಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಹಿಜಬ್‌ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಕುರಿತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಖೈಬರ್‌ ಪಖ್ತುಂಖ್ವಾದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಇಮ್ರಾನ್‌ ಖಾನ್‌ ಮಾತನಾಡುವಾಗ ಹಿಜಬ್‌ ವಿವಾದ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

ಇಸ್ಲಾಮೊಫೋಬಿಯಾ ಎಂದರೇನು? (ಇಸ್ಲಾಂ ಬಗ್ಗೆ ಭೀತಿ). ಹಿಜಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪನ್ನು ಇಸ್ಲಾಮೊಫೋನಿಯಾ ಎನ್ನಲಾಗುತ್ತದೆ. ಇದರರ್ಥ ಮಹಿಳೆಯರು ಯಾವ ಉಡುಪನ್ನಾದರೂ ಧರಿಸಬಹುದು, ಆದರೆ ಹಿಜಬ್‌ ಧರಿಸುವಂತಿಲ್ಲ ಎಂದು ತೀರ್ಪಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಹೆಚ್ಚಾಗುತ್ತಿರುವ ‘ಇಸ್ಲಾಮೊಫೋಬಿಯಾ’ (ಇಸ್ಲಾಂ ಬಗ್ಗೆ ಭೀತಿ) ಪೋಸ್ಟ್‌ಗಳಿಗೆ ಕಡಿವಾಣ ಹಾಕಬೇಕು. ಫೇಸ್‌ಬುಕ್‌ನಲ್ಲಿ ಇಸ್ಲಾಮೊಫೋಬಿಯಾ ಹೆಚ್ಚಾಗಲು ಭಾರತ ಮತ್ತು ಫ್ರಾನ್ಸ್‌ ಕಾರಣ ಎಂದು ಫೇಸ್‌ಬುಕ್‌ ಸಿಇಒ ಮಾರ್ಕ್‌ ಝೂಕರ್‌ಬರ್ಗ್‌ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈ ಹಿಂದೆ ಪತ್ರ ಬರೆದಿದ್ದರು. ಇದನ್ನೂ ಓದಿ: ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

ತರಗತಿಗಳಲ್ಲಿ ಹಿಜಬ್‌ ಧರಿಸುವುದನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ ತೀರ್ಪು ವಿರುದ್ಧವಾಗಿ ಇಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದ್ದು, ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳು ಹಿಜಬ್‌ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *