ಬೆಂಗಳೂರು: ನಗರದಲ್ಲಿ ಉದ್ಯಮಿ ಮೊಮ್ಮಗನ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಸಿಕ್ಕಿದೆ.
ಘಟನೆ ನಡೆದ ವೇಳೆ ಉದ್ಯಮಿ ಆದಿಕೇಶವುಲು ಮೊಮ್ಮಗನ ಕಾರಿನಲ್ಲಿ ಸ್ಯಾಂಡಲ್ವುಡ್ ನಟರು ಇದ್ದರು ಎಂದು ತಿಳಿದುಬಂದಿತ್ತು. ನಟ ಪ್ರಜ್ವಲ್ ದೇವರಾಜ್ ಹಾಗೂ ದಿಗಂತ್ ಕಾರಿನಲ್ಲಿ ಇದ್ದರೆಂಬ ಸುದ್ದಿ ಹರಿದಾಡಿತ್ತು. ಆದ್ರೆ ಇದನ್ನು ಅಲ್ಲಗಳೆದಿದ್ದ ಪ್ರಜ್ವಲ್ ದೇವರಾಜ್ ಹಾಗೂ ದಿಗಂತ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ಆದ್ರೆ ಆದಿಕೇಶವುಲು ಮೊಮ್ಮಗನ ಜೊತೆ ಕಾರಿನಲ್ಲಿ ಇದ್ದದ್ದು ಪ್ರಜ್ವಲ್ ದೇವರಾಜ್ ಅಲ್ಲ, ಅವರ ಸಹೋದರ ಪ್ರಣಾಮ್ ದೇವರಾಜ್ ಎಂದು ತಿಳಿದುಬಂದಿದೆ.
ಪ್ರಜ್ವಲ್ ಸಹೋದರ ಪ್ರಣಾಮ್ ದೇವರಾಜ್ನನ್ನು ನೋಡಿ ಜನರು ಗೊಂದಲಕ್ಕೀಡಾದರು. ನೋಡೋದಕ್ಕೆ ಇಬ್ಬರೂ ಒಂದೇ ರೀತಿ ಇದ್ದ ಹಿನ್ನೆಲೆಯಲ್ಲಿ ಜನ ಗೊಂದಲಕ್ಕೀಡಾಗಿದ್ದರು. ನಂತರ ಪ್ರಜ್ವಲ್ ದೇವರಾಜು ಅಂತ ತಪ್ಪಾಗಿ ಗ್ರಹಿಸಿದ್ದರು.
ಇದನ್ನೂ ಓದಿ: ಅಪಘಾತಕ್ಕೂ ನನಗೂ ಸಂಬಂಧವಿಲ್ಲ-ಅಭಿಮಾನಿಗಳಿಗೆ ವಿಡಿಯೋ ಶೇರ್ ಮಾಡಿದ ದಿಗಂತ್
ಪ್ರಣಾಮ್ ದೇವರಾಜು ಕೂಡ ನಟರಾಗಿದ್ದು, ಒಂದೆರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಣಾಮ್ ದೇವರಾಜ್ ಘಟನೆ ನಡೆದ ದಿನದಂದು ಸ್ಥಳದಲ್ಲೇ ಇದ್ದರು ಎಂಬ ಬಗ್ಗೆ ತಾಂತ್ರಿಕವಾಗಿ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಣಾಮ್ಗೆ ಈಗ ನೋಟಿಸ್ ಜಾರಿ ಮಾಡಿದ್ದಾರೆ ನಾಳೆಯೊಳಗಾಗಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
ಉದ್ಯಮಿಯ ಮೊಮ್ಮಗನ ಪುಂಡಾಟ ಪ್ರಕರಣದಲ್ಲಿ ವಿಷ್ಣುವಿಗಾಗಿ ತೀವ್ರ ಶೋಧದ ಬೆನ್ನಲ್ಲೆ ಪೊಲೀಸರು ಆಕ್ಟೀವ್ ಆಗಿದ್ದಾರೆ.
ಇದನ್ನೂ ಓದಿ: ಅಪಘಾತದ ಬಗ್ಗೆ ನಟರಾದ ದಿಗಂತ್, ಪ್ರಜ್ವಲ್ ಹೇಳಿದ್ದು ಹೀಗೆ
https://www.youtube.com/watch?v=XkSGJRHTDEw