ಶಾಸಕ ಸಿ.ಟಿ ರವಿ ಚುನಾವಣಾ ಪ್ರಚಾರದಲ್ಲಿ ‘ಸಿದ್ದರಾಮಯ್ಯಗೆ ಜೈ’ ಅಂದ ಕಾರ್ಯಕರ್ತರು

Public TV
1 Min Read

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ ರವಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೆಲ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಜೈ ಅಂತಾ ಘೋಷಣೆ ಕೂಗಿದ್ದಾರೆ.

ಸಿ ಟಿ ರವಿ ಅವರು ಚಿಕ್ಕಮಗಳೂರು ನಗರದ ವಾರ್ಡ್ 35 ಕೆಂಪನಹಳ್ಳಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಜೆಡಿಎಸ್, ಕಾಂಗ್ರೆಸ್ ಹಾಗು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಆರಂಭಗೊಂಡಿತು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಭಾಷಣದ ಮಧ್ಯೆ ‘ಕಾಂಗ್ರೆಸ್‍ಗೆ ಜೈ’ ಅಂದ ಗ್ರಾಮಸ್ಥರು-ವಿಡಿಯೋ ನೋಡಿ

ಕೆಲವರು ನಮ್ಮ ವಾರ್ಡ್ ನಲ್ಲಿ ಯಾವುದೇ ರೀತಿಯಲ್ಲಿ ಅಭಿವೃದ್ಧಿಯಾಗಿಲ್ಲ ಅಂತಾ ಶಾಸಕರನ್ನು ತರಾಟೆಗೆ ತೆಗೆಕೊಂಡ್ರು. ಕೂಡಲೇ ಕೆಲವರು ಸಿಎಂ ಸಿದ್ದರಾಮಯ್ಯಗೆ ಜೈ ಅಂತಾ ಘೋಷಣೆ ಕೂಗಲು ಆರಂಭಿಸಿದರು. ಇದ್ರಿಂದ ಕೋಪಗೊಂಡ ಶಾಸಕರ ಬೆಂಬಲಿಗರು ಬಿಜೆಪಿಗೆ ಜೈ ಅಂತಾ ಮರು ಘೋಷಣೆ ಕೂಗಿದ್ರು.

Share This Article
Leave a Comment

Leave a Reply

Your email address will not be published. Required fields are marked *