ಜಯಲಲಿತಾ ಸಾವಿಗೆ ಆಪ್ತೆ ಶಶಿಕಲಾ ಕಾರಣ – ಸರ್ಕಾರಕ್ಕೆ ವರದಿ ಸಲ್ಲಿಕೆ

Public TV
1 Min Read

ಚೆನೈ : ತಮಿಳುನಾಡು(Tamilnadu) ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ(Jayalalithaa Death) ಅವರ ಆಪ್ತೆ ವಿ.ಕೆ ಶಶಿಕಲಾ( Sasikala) ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ (Arumugasamy Commission) ಹೇಳಿದೆ.

ಜೆ ಜಯಲಲಿತಾ ಅವರ ಸಾವಿನ ಕುರಿತಾದ ತನ್ನ 608 ಪುಟಗಳ ವರದಿಯನ್ನು ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ ಇಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಇದನ್ನೂ ಓದಿ: ಚಾಲೆಂಜ್ ಸೋತ ಗಡ್ಕರಿ – ಎಂಪಿಗೆ ಕೊಡಬೇಕು 32 ಸಾವಿರ ಕೋಟಿ

ಸಮಿತಿಯ ಪರಿಶೀಲನೆಯ ಪ್ರಕಾರ ಜಯಲಲಿತಾ ಸಾವು ಪ್ರಕರಣದಲ್ಲಿ ಅವರ ಆಪ್ತ ಸಹಾಯಕಿ ವಿ.ಕೆ ಶಶಿಕಲಾ, ಡಾ ಶಿವಕುಮಾರ್ (ಜಯಲಲಿತಾ ಅವರ ಆಪ್ತ ವೈದ್ಯ ಮತ್ತು ಶಶಿಕಲಾ ಅವರ ಸಂಬಂಧಿ), ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ಮಾಜಿ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದೆ.

ನ್ಯಾಯಮೂರ್ತಿ ಎ ಆರುಮುಗಸ್ವಾಮಿ ಸಮಿತಿಯೂ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ನೀಡಿದ ಎಲ್ಲಾ ಬಗೆಯ ಚಿಕಿತ್ಸೆಗಳ ಬಗ್ಗೆ ಅಧ್ಯಯನ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸಮಿತಿಯೂ ಈ ಹಿಂದೆ ವರದಿಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. ಇದಾದ ಬಳಿಕ ಕಳೆದ ಆಗಸ್ಟ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *