ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

Public TV
1 Min Read

ಬೆಂಗಳೂರು: ಶಾಲಾ (School) ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆಗೆ ಸಿದ್ಧತೆ ಪ್ರಾರಂಭವಾಗಿದ್ದು, ಅದಕ್ಕಾಗಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ಸರ್ಕಾರ (Government Of Karnataka) ಮುಂದಾಗಿದೆ. ನಾಡಿನ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ನೈತಿಕ ಶಿಕ್ಷಣದ ಪಠ್ಯ ಹೇಗೆ ಇರಬೇಕು? ಅಂತ ಶ್ರೀಗಳು ಪಠ್ಯ ಸಿದ್ಧ ಮಾಡಲಿದ್ದಾರೆ.

ನೈತಿಕ ಶಿಕ್ಷಣದ ಪಠ್ಯ ಸಿದ್ಧತೆಗೆ ನಾಡಿನ ಶ್ರೇಷ್ಠ ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರದ ಚಿಂತನೆ ನಡೆಸಿದೆ. ಸುತ್ತೂರು (Shivaratri Deshikendra Swamiji), ಆದಿಚುಂಚನಗಿರಿ, ಸಿದ್ದಗಂಗಾ ಶ್ರೀಗಳು ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿ ರಚನೆ ಬಗ್ಗೆ ಶಿಕ್ಷಣ ಇಲಾಖೆ ಧರ್ಮಗುರುಗಳು, ಶ್ರೀಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರವೇ ಶ್ರೀಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆ ಆಗಲಿದೆ. ಇದನ್ನೂ ಓದಿ: ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

ನೈತಿಕ ಶಿಕ್ಷಣ ಪಠ್ಯದ ಸಮಿತಿಯ ಕೆಲಸ ಏನು?
ಈ ಸಮಿತಿ ನೈತಿಕ ಶಿಕ್ಷಣ ಪಠ್ಯ ಹೇಗಿರಬೇಕು ಅಂತಾ ನಿರ್ಧಾರ ಮಾಡಲಿದೆ. ಯಾವ ಪಠ್ಯ ಸೇರ್ಪಡೆ ಮಾಡಬೇಕು? ಯಾರ ಪಠ್ಯ ಸೇರ್ಪಡೆ ಮಾಡಬೇಕು? ಎಂಬುದನ್ನ ನಿರ್ಧರಿಸಲಿದೆ. ರಾಮಾಯಣ, ಮಹಾಭಾರತ, ಭಗವದ್ಗೀತೆ ಸೇರಿದಂತೆ ಯಾವ-ಯಾವ ಮಹಾ ದಾರ್ಶನಿಕ ಗ್ರಂಥಗಳು ಪಠ್ಯದಲ್ಲಿ ಸೇರ್ಪಡೆ ಮಾಡಬೇಕು ಅಂತಾ ಸಮಿತಿ ನಿರ್ಧಾರ ಮಾಡಲಿದೆ. ಪಂಚತಂತ್ರ ಕಥೆಗಳು, ದಾರ್ಶನಿಕರ ಜೀವನ ಚರಿತ್ರೆ, ಅವರು ಆಚರಿಸಿಕೊಂಡು ಬಂದ ನೈತಿಕ ಮೌಲ್ಯಗಳ ಕುರಿತು ಪಠ್ಯ ರಚನೆಯಾಗಲಿದೆ. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಅಗತ್ಯವಾದ ಮೌಲ್ಯಾಧಾರಿತ ನೀತಿಕಥೆಗಳನ್ನ ಪಠ್ಯದಲ್ಲಿ ಸೇರ್ಪಡೆ ಮಾಡುವುದು. ಗುರು-ಹಿರಿಯ ಭಕ್ತಿ, ಸಂಸ್ಕಾರ, ಆಚಾರ-ವಿಚಾರಗಳು, ಸತ್ಯ, ಶಾಂತಿ, ಪ್ರೀತಿ ವಿಶ್ವಾಸಗಳ ಬಗ್ಗೆ ಮಕ್ಕಳಿಗೆ ಪಾಠ ಹೇಳುವ ಕಥೆಗಳು, ವ್ಯಕ್ತಿಗಳ ಜೀವನಾಧಾರಿತ ಪಠ್ಯಗಳ ಸೇರ್ಪಡೆಗೆ ಸಮಿತಿ ಅಗತ್ಯವಾದ ಕ್ರಮ ಕೈಗೊಳ್ಳಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *