ಮಾಜಿ ಕೇಂದ್ರ ಸಚಿವ ಸಿದ್ದೇಶ್ವರ್ ನಿವಾಸದ ಮೇಲೆ ಐಟಿ ದಾಳಿ

Public TV
0 Min Read

ಚಿತ್ರದುರ್ಗ: ಕೇಂದ್ರ ಮಾಜಿ ಸಚಿವ ಸಿದ್ದೇಶ್ವರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಭೀಮಸಂದ್ರದಲ್ಲಿರುವ ತೋಟದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜಿಎಂ ಸಿದ್ದೇಶ್ವರ್ ಗೆ ಸೇರಿದ ಮೂರು ಫ್ಯಾಕ್ಟರಿ ಮತ್ತು ಜಿಎಂ ಸೌಹಾರ್ದ ಪತ್ತಿನ ಸಹಕಾರಿ ಬ್ಯಾಂಕಿನ ಮೇಲೂ ದಾಳಿ ನಡೆದಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರವಾಗಿರುವ ಜಿಎಂ ಸಿದ್ದೇಶ್ವರ್ ಈ ಹಿಂದೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವರಾಗಿದ್ದರು. ಮೋದಿ ಸಂಪುಟದ ಪುನಾರಚನೆ ವೇಳೆ ಅವರನ್ನು ಕೈಬಿಡಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *