ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

Public TV
2 Min Read

– ಸೇವಾಶುಲ್ಕ ಹೆಚ್ಚಳ ಸರ್ಕಾರದ ತೀರ್ಮಾನವಲ್ಲ, ಆಡಳಿತ ಮಂಡಳಿ ನಿರ್ಧಾರವೆಂದ ಸಚಿವ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ (Muzrai Department) ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ (Temples) ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ

ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
ಬೆಂಗಳೂರು ನಗರ
* ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
* ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
* ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

ಚಿಕ್ಕಬಳ್ಳಾಪುರ
* ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
* ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

ದಕ್ಷಿಣ ಕನ್ನಡ
* ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
* ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
* ಸೌತಡ್ಕ ಮಹಾಗಣಪತಿ ದೇವಾಲಯ
* ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ‌ ಸೇವೆಗಳಲ್ಲೂ‌ ಭಾರೀ‌ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

Share This Article