RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ

Public TV
1 Min Read

ನವದೆಹಲಿ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ (INDIA) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ. ಮತ್ತು ಪ್ರಜಾಪ್ರಭುತ್ವದ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಾಗಾ ಸಂಸ್ಥೆಗೆ ಭೇಟಿ ನೀಡಿದ ಕ್ಲಿಪ್‌ಅನ್ನು ಕಾಂಗ್ರೆಸ್ (Congress) ಹಂಚಿಕೊಂಡಿದೆ. ಅದರಲ್ಲಿ ಅವರು ಭಾರತೀಯ ಪ್ರಜಾಪ್ರಭುತ್ವದ ಕೊಲೆಯನ್ನು ನಾವು ಸಹಿಸುವುದಿಲ್ಲ ಎಂದು ನಮ್ಮ ಮೈತ್ರಿಕೂಟದ ಪ್ರತಿಯೊಬ್ಬ ವ್ಯಕ್ತಿಯೂ ಒಪ್ಪಿಕೊಂಡಿದ್ದಾರೆ. ಎರಡನೆಯದಾಗಿ ನಮ್ಮ ಸಾಂಸ್ಥಿಕ ಚೌಕಟ್ಟನ್ನು ಆರ್‌ಎಸ್‌ಎಸ್ ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಯೊಬ್ಬ ವ್ಯಕ್ತಿಯೂ ಅಭಿಪ್ರಾಯಪಟ್ಟಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದಲ್ಲಿ 2-3 ವ್ಯಾಪಾರ ಸಂಸ್ಥೆಗಳ ಏಕಸ್ವಾಮ್ಯವಿದೆ. ಕಳೆದ 9 ವರ್ಷಗಳಲ್ಲಿ 20 ಕೋಟಿ ಜನರು ಬಡತನಕ್ಕೆ ಜಾರಿದ್ದಾರೆ. ಮೂರನೆಯದಾಗಿ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಹೆಚ್ಚು ಖರ್ಚು ಮಾಡಬೇಕು ಮತ್ತು ತೊಡಗಿಸಿಕೊಳ್ಳಬೇಕು ಎಂದು ನಾವೆಲ್ಲರೂ ಒಪ್ಪುತ್ತೇವೆ. ದಲಿತರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಸೇರಿದಂತೆ ಕೆಲವು ಜನರ ಗುಂಪುಗಳು ಭಾರತದ ಬೆಳವಣಿಗೆಯ ಕಥೆಗಳಲ್ಲಿಯೇ ಸೇರಿಸಲಾಗಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

ಆದರೂ ಹಲವಾರು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳಿವೆ. ಉದಾಹರಣೆಗೆ ಕೇರಳದಲ್ಲಿ ಎಡಪಕ್ಷಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಹೋರಾಟವಿದೆ. ಆದರೆ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಎಂದಿಗೂ ಅಧಿಕಾರ ಹಿಡಿಯದಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ. ಬಂಗಾಳದಲ್ಲಿ ಬಿಜೆಪಿ ವಿರುದ್ಧ ನಿಲ್ಲುವುದು ಪ್ರಯೋಜನಕಾರಿ ಎಂಬುದು ಸ್ಪಷ್ಟವಾಗಿದೆ. ಆ ಗುರಿಯನ್ನು ಸಾಧಿಸಬಹುದೇ? ಇದು ಮುಂದೆ ಏನಾಗಬಹುದು? ಎಂಬುದನ್ನು ಈಗಲೇ ಹೇಳುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಓಲಾ ಬೈಕ್ ನಿಲ್ಲಿಸುವಂತೆ ಸಾರಿಗೆ ಆಯುಕ್ತರಿಗೆ ಮನವಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್