ತಮಿಳುನಾಡಿನಲ್ಲಿ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

Public TV
2 Min Read

ಚೆನ್ನೈ: ತಮಿಳುನಾಡಿನ ಹಲವಾರು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್‍ನಲ್ಲಿ ವಾಯುಭಾರದ ಕುಸಿತದಿಂದ ಸಮುದ್ರ ಮಟ್ಟದಿಂದ 5.8 ಕಿಲೋಮೀಟರ್‍ಗಳವರೆಗೆ ವಿಸ್ತರಿಸಿದೆ. ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದೆರಡು ದಿನಗಳಿಂದ ಚೆನ್ನೈನ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮಳೆಯಿಂದಾಗಿ ರಾಜ್ಯದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನಿನ್ನಂತೆ ಸಮಾಜ ಸೇವೆ ಮಾಡೋ ಶಕ್ತಿ ನನಗೆ ನೀಡು ಮಗನೇ: ರಾಘಣ್ಣ

ಸೋಮವಾರ (ನವೆಂಬರ್ 8)ರಂದು ರಾಜ್ಯದ ಹಲವಾರು ರಸ್ತೆಗಳು ಜಲಾವೃತಗೊಂಡಿದ್ದು, ಹೆಚ್ಚುವರಿ ಮಳೆಯ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್‍ಗಳನ್ನು ತೆರೆಯಲಾಯಿತು. ರಾಜ್ಯದ ಕೆಲವು ತಗ್ಗು ಪ್ರದೇಶಗಳಲ್ಲಿರುವ ಸುಮಾರು 60ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆ ಚೆನ್ನೈ, ಥೇಣಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ಟವೆಲ್ ಕೊಡಲು ತಡವಾಗಿದ್ದಕ್ಕೆ ಹೆಂಡತಿಯ ಬರ್ಬರ ಹತ್ಯೆ

ಚೆನ್ನೈ ಅನೇಕ ರಸ್ತೆ ಗುಂಡಿಗಳು ನೀರಿನಿಂದ ಸಂಪೂರ್ಣ ಮುಚ್ಚಲ್ಪಟ್ಟಿದ್ದರೆ, ತಗ್ಗು ಪ್ರದೇಶಗಳಲ್ಲಿ ಎರಡು ಅಡಿಗಳಷ್ಟು ನೀರು ತುಂಬಿಕೊಂಡಿದೆ. ಜನರ ಸುರಕ್ಷತೆಯನ್ನು ಪರಿಗಣಿಸಿ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜನ್ನು ಸಹ ಕಡಿತಗೊಳಿಸಲಾಗಿದೆ. ಮಳೆಯಿಂದಾಗಿ ಜಲಾವೃತಗೊಂಡಿದ್ದ ನಗರ ಪೊಲೀಸ್ ಠಾಣೆ ಆದಂಬಕ್ಕಂ ಅನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕಾಯಿತು. ಮಳೆಗೆ ಕನಿಷ್ಠ 75 ಮರಗಳು ನೆಲಕ್ಕುರುಳಿದ್ದು,ಅವುಗಳನ್ನು ಪೌರ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು – ಇನ್ನೂ ಎರಡು ದಿನ ರೆಡ್ ಅಲರ್ಟ್

ಕೊಯಮತ್ತೂರು ಜಿಲ್ಲಾಡಳಿತವು ನಿರಂತರ ಮಳೆಯಾಗುತ್ತಿರುವ ನೊಯ್ಯಲ್ ನದಿಯ ದಡದಲ್ಲಿ ವಾಸಿಸುವ ಜನರಿಗೆ ಸುರಕ್ಷತಾ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಪುದುಚೇರಿಯಲ್ಲಿಯೂ ಮಳೆ ಮುಂದುವರೆದಿದ್ದು, ಹಲವಾರು ಮನೆಗಳು ನಾಶವಾಗಿವೆ.

Share This Article
Leave a Comment

Leave a Reply

Your email address will not be published. Required fields are marked *