ಇದು ಅಸಂಬದ್ಧ, ಪ್ರೇರಿತ- ಕೆನಡಾ ಆರೋಪ ತಿರಸ್ಕರಿಸಿದ ಭಾರತ

By
1 Min Read

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತ ಕೈವಾಡವಿದೆ ಎಂಬ ಕೆನಡಾ ಆರೋಪವನ್ನು ಭಾರತ ತಿರಸ್ಕಾರ ಮಾಡಿದೆ.

ಈ ಸಂಬಂಧ ಭಾರತದ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಕೆನಡಾದ ಆರೋಪಗಳು “ಅಸಂಬದ್ಧ ಮತ್ತು ಪ್ರೇರಿತ” ಎಂದು ಬಣ್ಣಿಸಿದೆ. ಇಂತಹ ಆರೋಪಗಳು ನಮ್ಮ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುತ್ತಿರುವ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗುತ್ತವೆ ಎಂದು ಹೇಳಿದೆ. ಇದನ್ನೂ ಓದಿ: ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ

ಕೆನಡಾ ಸಂಸತ್ತಿನಲ್ಲಿ ಅಲ್ಲಿನ ಪ್ರಧಾನಿ ನೀಡಿರುವ ಹೇಳಿಕೆಯನ್ನು ನೋಡಿದ್ದೇವೆ. ಹೀಗಾಗಿ ಕೆನಡಾ ಪ್ರಧಾನಿ ಹಾಗೂ ಕೆನಡಾ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆಯನ್ನು ತಿರಸ್ಕರಿಸುತ್ತಿದ್ದೇವೆ. ಕೆನಡಾದಲ್ಲಿ ಯಾವುದೇ ಹಿಂಸಾಚಾರದಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂಬ ಆರೋಪಗಳು ಅಸಂಬದ್ಧವಾದದ್ದು. ನಾವು ಕಾನೂನಿನ ಆಳ್ವಿಕೆಗೆ ಬದ್ಧತೆ ಹೊಂದಿರುವ ಪ್ರಜಾಸತ್ತಾತ್ಮಕ ರಾಜಕೀಯ ಹೊಂದಿದ್ದೇವೆಂದು ತಿಳಿಸಿದೆ.\

ಕೆನಡಾದಲ್ಲಿ ಕೊಲೆ, ಮಾನವ ಕಳ್ಳಸಾಗಣೆ ಮತ್ತು ಸಂಘಟಿತ ಅಪರಾಧ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಹೊಸದೇನಲ್ಲ. ಇದೀಗ ಕೆನಡಾ ಪ್ರಧಾನಿ ನಮ್ಮ ಪ್ರಧಾನಿಯವರ ಮೇಲೆ ಆರೋಪ ಮಾಡಿದ್ದು, ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ. ನಮ್ಮದು ಪ್ರಜಾಸತ್ತಾತ್ಮಕ ದೇಶವಾಗಿದ್ದು, ಕಾನೂನಿನ ನಿಯಮಕ್ಕೆ ಬಲವಾದ ಬದ್ಧತೆ ಇದೆ ಎಂದಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್