ಭಾರತೀಯ ಸೇನೆಯಿಂದ ಹಿಮಪಾತದಲ್ಲಿ ಸಿಲುಕಿದ್ದ 14 ಮಂದಿ ರಕ್ಷಣೆ

Public TV
1 Min Read

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್-ಚೌಕಿಬಲ್ ಹೆದ್ದಾರಿಯಲ್ಲಿ ಹಿಮ ಕುಸಿತದಲ್ಲಿ ಸಿಲುಕಿದ್ದ 14 ನಾಗರಿಕರನ್ನು ಭಾರತೀಯ ಸೇನೆ ರಕ್ಷಿಸಿದೆ.

ಹಿಮಪಾತದಲ್ಲಿ ಒಂದು ಮಗು ಸೇರಿದಂತೆ 14 ನಾಗರಿಕರು ಸಿಲುಕಿಕೊಂಡಿದ್ದರು. ಅವರನ್ನು ಭಾರತೀಯ ಸೈನಿಕರು ರಕ್ಷಣೆ ಮಾಡಲಾಗಿದ್ದು, ನಂತರ ಅವರನ್ನು ಹತ್ತಿರದ ಸೇನಾ ಶಿಬಿರಕ್ಕೆ ಕರೆದೊಯ್ದು ಆಹಾರ ಮತ್ತು ಬಿಸಿಯೂಟವನ್ನು ನೀಡಲಾಗಿದೆ.

ಹೃದ್ರೋಗಿಗಳು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಪ್ರಯಾಣಿಕರು ತುಂಬಿರುವ ವಾಹನಗಳ ಬಗ್ಗೆ ಮಾಹಿತಿ ಪಡೆಯಲಾಗಿತ್ತು. ನಂತರ GREF ಜೊತೆಗೆ ಕ್ಯಾಪ್ಟನ್ ಕುಲ್ಜೋತ್ ಸಿಂಗ್ ಅವರ ನೇತೃತ್ವದಲ್ಲಿ ನೀಲಂ ಕಂಪನಿ ಆಪರೇಟಿಂಗ್ ಬೇಸ್‍ನಿಂದ ಭಾರತೀಯ ಸೇನೆಯ ಹಿಮಪಾತ ರಕ್ಷಣಾ ತಂಡವು ತಕ್ಷಣವೇ ಕಾರ್ಯಪ್ರವೃತ್ತವಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾಸ್ ವಿತರಣಾ ಯೋಜನೆಗೆ 7000 ಕೋಟಿ ರೂ. ಹೂಡಿಕೆ: ಇಂಡಿಯನ್ ಆಯಿಲ್

ಪ್ರಯಾಣಿಕರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ರಕ್ಷಿಸಲ್ಪಟ್ಟ ನಾಗರಿಕರು ಸಮಯೋಚಿತ ಕ್ರಮಕ್ಕಾಗಿ ಮತ್ತು ತಮ್ಮ ಜೀವಗಳನ್ನು ಉಳಿಸಿದ್ದಕ್ಕಾಗಿ ಸೇನೆಗೆ ಕೃತಜ್ಞತೆ ಸಲ್ಲಿಸಿದರು ಎಂದು ಭಾರತೀಯ ಸೇನೆ ಹೇಳಿದೆ. ಇದನ್ನೂ ಓದಿ: ಯೋಗಿ ಸರ್ಕಾರದಿಂದ 16.5 ಲಕ್ಷ ಯುವಕರು ಉದ್ಯೋಗದಿಂದ ವಂಚಿತ: ಪ್ರಿಯಾಂಕಾ ಗಾಂಧಿ

Share This Article
Leave a Comment

Leave a Reply

Your email address will not be published. Required fields are marked *