ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಇಂಡಿಕಾ ಕಾರ್

Public TV
1 Min Read

ಮಂಗಳೂರು: ಇಂಡಿಕಾ ಕಾರೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದು ಘಟನೆ ಮಂಗಳೂರಿನ ಜ್ಯೋತಿ ವೃತ್ತದಲ್ಲಿ ನಡೆದಿದೆ.

ಕಾರು ಜ್ಯೋತಿ ವೃತ್ತ ತಲುಪುತ್ತಿದ್ದಂತೆ ಕಾರಿನ ಮುಂಭಾಗದಿಂದ ಹೊಗೆ ಕಾಣಿಸಿಕೊಂಡಿದೆ. ಇದನ್ನು ಕಾರಿನಲ್ಲಿದ್ದವರು ಗಮನಿಸಿದ್ದು, ತಕ್ಷಣ ಕಾರಿನಿಂದ ಹೊರ ಬಂದಿದ್ದಾರೆ.

ರಸ್ತೆಯ ಮಧ್ಯದ್ದಲ್ಲಿಯೇ ಎಲ್ಲರೂ ನೋಡ ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿಕೊಂಡು ಉರಿದಿದೆ. ನಂತರ ಸ್ಥಳದಲ್ಲಿದ್ದವರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿದಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸೇರಿ ಕಾರಿಗೆ ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಸದ್ಯಕ್ಕೆ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕಾರು ಬಹುತೇಕ ಉರಿದು ಹೋಗಿತ್ತು.

Share This Article
Leave a Comment

Leave a Reply

Your email address will not be published. Required fields are marked *