ಪಲ್ಟಿಯಾಗಿ ರಸ್ತೆ ಬದಿ ಕಂದಕಕ್ಕೆ ಉರುಳಿದ ಇಂಡಿಕಾ ಕಾರ್

Public TV
0 Min Read

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಇಂಡಿಕಾ ಕಾರು ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಕಾರ್ ಪಲ್ಟಿಯಾದ್ರೂ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ನಾಲ್ವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನತ್ತ ತಮ್ಮ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿಗಳು ಲಭ್ಯವಾಗಿವೆ.

ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *