ಚಾಮುಂಡೇಶ್ವರಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೋಲಿಸಲು ಒಂದಾದ ಪಕ್ಷೇತರರು

Public TV
1 Min Read

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಪಕ್ಷೇತರ ಅಭ್ಯರ್ಥಿಗಳು ಒಂದಾಗಿ ಮೂರು ಪಕ್ಷಗಳ ವಿರುದ್ಧ ಸಮರ ಸಾರಿದ್ದಾರೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ವಿರುದ್ಧ ಗೆಲುವು ಸಾಧಿಸಲು ಪಕ್ಷೇತರ ಅಭ್ಯರ್ಥಿಗಳು ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿ ಒಟ್ಟಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.

12 ಜನ ಪಕ್ಷೇತರ ಅಭ್ಯರ್ಥಿಗಳಲ್ಲಿ ಯಾರಿಗಾದರೂ ಮತ ಹಾಕಿ. ಆದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಜನರಲ್ಲಿ ಮನವಿ ಮಾಡುವ ತೀರ್ಮಾನ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ಹಾಲಿ ಶಾಸಕ ಜಿ ಟಿ ದೇವೇಗೌಡ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಇದ್ದರೂ ಸಿದ್ದರಾಮಯ್ಯ ಅವರನ್ನು ಮಣಿಸಲು ಜೆಡಿಎಸ್ ಜೊತೆ ಕೈಜೋಡಿಸಿದೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದೆ.

ಗುರುಮಲ್ಲೇಶ್ (ಆಲ್ ಇಂಡಿಯಾ ಮಹಿಳಾ ಎಂಪ್‍ಪವರ್‍ಮೆಂಟ್ ಪಾರ್ಟಿ), ಎಂ.ಎಸ್.ಪ್ರವೀಣ್ (ಭಾರತೀಯ ಜನಶಕ್ತಿ ಕಾಂಗ್ರೆಸ್), ಎಂ.ಮಾದೇಶ (ಸಾಮಾನ್ಯ ಜನತಾ ಪಾರ್ಟಿ-ಲೋಕತಾಂತ್ರಿಕ್), ಪಿ.ಕರಿಗೌಡ, ಕೆ.ಸಿ.ನಂದೀಶ, ಪಿ.ಪುರುಷೋತ್ತಮ, ಆರ್.ಬಿ.ಬಸವೇಗೌಡ, ಎಂ.ಎಂ.ಮಹೇಶಗೌಡ, ಎಂ.ಮಂಜು, ಎಂ.ಎಸ್.ರಾಚಣ್ಣ, ಶಾಂತರಾಜು, ಪಿ.ಸುರೇಶನಾಯಕ (ಪಕ್ಷೇತರರು) ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *