– 70 ಸಾವಿರ ಕ್ಯುಸೆಕ್ ಹೊರಹರಿವು
ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.ಇದನ್ನೂ ಓದಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಒಬ್ಬೊಬ್ಬರೇ ಬಾಯಿ ಬಿಡ್ತಾರೆ – ಬಿಎಸ್ವೈ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 98,611 ಕ್ಯುಸೆಕ್ ನೀರಿನ ಒಳಹರಿವು ಇದೆ.
ಜಲಾಶಯದಿಂದ ಬಸವಸಾಗರ ಡ್ಯಾಂಗೆ 70 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ತಟದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. 519.60 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 516.21 ಅಡಿ ನೀರಿದೆ. 123.081 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಇಂದು 75.248 ಟಿಎಂಸಿ ನೀರಿದೆ.ಇದನ್ನೂ ಓದಿ: ಮೈದುಂಬಿ ಹರಿಯುತ್ತಿದ್ದಾಳೆ ಕಪಿಲಾ – ಮುಳುಗಡೆಯ ಭೀತಿಯಲ್ಲಿ ನಂಜನಗೂಡಿನ ಸ್ನಾನ ಘಟ್ಟ