KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ – ಕಾವೇರಿ ನದಿಗೆ 29,000 ಕ್ಯೂಸೆಕ್‌ ನೀರು ಬಿಡುಗಡೆ

Public TV
1 Min Read

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದೆ. ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ಭರ್ತಿಯಂಚಿಗೆ ಕೆಆರ್‌ಎಸ್‌ ಜಲಾಶಯ ತಲುಪಿದೆ. ಮುಂಜಾಗ್ರತಾ ಕ್ರಮವಾಗಿ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ. ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹೊಸ ದಾಖಲೆಗೆ ಸಿದ್ಧವಾಗ್ತಿದೆ ಕೆಆರ್‌ಎಸ್ – ಡ್ಯಾಂ ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ

ಸದ್ಯ ಕೆಆರ್‌ಎಸ್‌ ಡ್ಯಾಂ 121 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಗಂಟೆ ಗಂಟೆಗೂ ಡ್ಯಾಂನ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ಕೆಆರ್‌ಎಸ್‌ಗೆ 20,315 ಕ್ಯೂಸೆಕ್ ಒಳಹರಿವು ಬರ್ತಿದೆ.

ಸಂಜೆ ಅಥವಾ ನಾಳೆ ಬೆಳಗ್ಗೆ 50 ಕ್ಯೂಸೆಕ್‌ಗೆ‌ ಏರಿಕೆ ಆಗುವ ಸಾದ್ಯತೆ ಇದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ

ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಮಿಷಾಂಭ, ಶ್ರೀಗಂಗನಾಥ ದೇವಾಲಯದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

Share This Article