ಇನ್ಫಿ ಫೌಂಡೇಶನ್‍ನಿಂದ ಜೀರ್ಣೋದ್ಧಾರಗೊಂಡ ವಸಂತಪುರ ಕಲ್ಯಾಣಿ ಉದ್ಘಾಟನೆ

Public TV
0 Min Read

ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್ ಸಂಸ್ಥೆಯು ಜೀರ್ಣೋದ್ಧಾರ ಮಾಡಿದ್ದ ಐತಿಹಾಸಿಕ ವಸಂತಪುರ ಕಲ್ಯಾಣಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಿದ್ದಾರೆ.

ಉತ್ತರಹಳ್ಳಿಯ ವಸಂತಪುರದಲ್ಲಿರುವ ಐತಿಹಾಸಿಕ ಕಲ್ಯಾಣಿಯನ್ನು ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕರಾದ ಶ್ರೀಮತಿ ಸುಧಾಮೂರ್ತಿಯವರ ಸಹಾಯ ಹಸ್ತದಿಂದ ಅಭಿವೃದ್ಧಿ ಪಡಿಸಲಾಗಿತ್ತು. ಈ ಐತಿಹಾಸಿಕ ಕಲ್ಯಾಣಿಗೆ ಮರುಜೀವ ನೀಡಲು ಇನ್ಫೋಸಿಸ್ ಫೌಂಡೇಷನ್ ಸುಮಾರು 8.5 ಕೋಟಿ ರೂಪಾಯಿ ವೆಚ್ಚ ಮಾಡಿತ್ತು.

ಸಂಸ್ಥೆಯು ಜೀರ್ಣೋದ್ಧಾರ ಮಾಡಿದ ಕಲ್ಯಾಣಿಯನ್ನು ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಉದ್ಘಾಟನೆ ಮಾಡಿದ್ದಾರೆ. ಈ ಸಮಾರಂಭದಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ಎಂ.ಕೃಷ್ಣಪ್ಪ, ಡಿಸಿ ಶೈಲಜಾ ಸೇರಿದಂತೆ ಸುಧಾಮೂರ್ತಿಯವರು ಪಾಲ್ಗೊಂಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *