ನೂರಾರು ಅಭಿಮಾನಿಗಳಿಂದ ರಕ್ತದಾನ ಮಾಡಿ ಆರ್‌ಸಿಬಿ ಗೆಲುವಿಗೆ ಶುಭ ಹಾರೈಕೆ

1 Min Read

ಬೆಂಗಳೂರು: ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಆರ್‌ಸಿಬಿ (RCB) ಅಭಿಮಾನಿಗಳು ರಕ್ತದಾನ (Blood Donation) ಮಾಡಿ ತಮ್ಮ ನೆಚ್ಚಿನ ತಂಡದ ಗೆಲುವಿಗೆ ಶುಭ ಹಾರೈಸಿದ್ದಾರೆ.

ಪ್ರತಿ ವರ್ಷ ಆರ್‌ಸಿಬಿ ಮ್ಯಾಚ್‌ಗೂ ಮುನ್ನ ರಕ್ತದಾನ ಮಾಡುತ್ತೇವೆ. ಈ ಬಾರಿಯ ಉದ್ಘಾಟನಾ ಪಂದ್ಯ ಗೆಲ್ಲುವ ವಿಶ್ವಾಸವಿದೆ. ಅಲ್ಲದೇ ಮತ್ತೆ ಈ ಬಾರಿ ನಮ್ಮ ತಂಡ ಟ್ರೋಫಿ ಗೆಲ್ಲಲಿದೆ. ಆರ್‌ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಗ್ರೌಂಡ್‌ಲ್ಲಿ ನೋಡೋದೇ ಚೆಂದ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

ಸಾಮೂಹಿಕ ರಕ್ತದಾನ ಮಾಡಿದ ಅಭಿಮಾನಿಗಳು, ತಮ್ಮ ನೆಚ್ಚಿನ ತಂಡದ ಗೆಲುವಿಗಾಗಿ ಪ್ರಾರ್ಥಿಸಿದರು. ಬಳಿಕ ಕಳೆದ ಬಾರಿಯಂತೆ ಈ ಬಾರಿಯೂ ಕಪ್ ನಮ್ದೇ. ಕಳೆದ ಬಾರಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಅಭಿಮಾನಿಗಳ ನೆನಪು ಎಂದಿಗೂ ಕಾಡಲಿದೆ. ಆ ಅಭಿಮಾನಿಗಳಿಗೆ ಗೌರವ ಅರ್ಪಣೆ ಮಾಡುವಂತೆ ಆರ್‌ಸಿಬಿ ಆಡಬೇಕು ಎಂದು ಅಭಿಮಾನಿಗಳು ಹೇಳಿದ್ದಾರೆ.

18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ಚಾಂಪಿಯನ್ ಆರ್‌ಸಿಬಿಯ ತವರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯಲಿದೆ.

ಮೊದಲ ಪಂದ್ಯದಲ್ಲಿ ಆರ್‌ಸಿಬಿ vs ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಟೂರ್ನಿ ಇದಾಗಿರುವುದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭದ್ರತೆಗೆ 2,000 ಪೊಲೀಸರನ್ನ (Bengaluru Police) ನಿಯೋಜಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Share This Article