ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

Public TV
3 Min Read

– ಹಸಿರು ಜೆರ್ಸಿಯಲ್ಲಿ ಆರ್‌ಸಿಬಿಗೆ ಗೆಲುವಿಗಿಂತ ಸೋಲೇ ಹೆಚ್ಚು

ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ (RCB) ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೆ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ. ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ.

ಇಂದಿಗೂ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಮಾಜ ಸೇವಾ ಕಾರ್ಯಗಳಿಗೂ ಮುಂದಾಗಿದೆ. ಪ್ರತಿ ಬಾರಿ ತನ್ನ ಆವೃತ್ತಿಯಲ್ಲಿ ಹಸಿರು ಜೆರ್ಸಿ ಧರಿಸಿ ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಆರ್‌ಸಿಬಿ ಕ್ರಿಕೆಟ್ ಫ್ರಾಂಚೈಸಿ, ಈ ಬಾರಿ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು (Benglauru Lakes) ಮರು ಅಭಿವೃದ್ಧಿಗೊಳಿಸಲು ಮುಂದಾಗಿದೆ. ತಂಡದ ಹಸಿರು ಅಭಿಯಾನ ಯೋಜನೆಯಡಿ ಈ ಕೆಲಸಕ್ಕೆ ಫ್ರಾಂಚೈಸಿ ಮುಂದಾಗಿದೆ. ಇದನ್ನೂ ಓಧಿ: ಫೇಕ್‌ ನ್ಯೂಸ್‌ ಬಗ್ಗೆ ಹಿಟ್‌ಮ್ಯಾನ್‌ ಸ್ಪಷ್ಟನೆ – ಟಿ20 ವಿಶ್ವಕಪ್‌ಗೆ ಹೀಗಿದೆ ಭಾರತದ ಸಂಭಾವ್ಯ ತಂಡ!

ಬೆಂಗಳೂರಿನ ಇಟ್ಟಗಾಲಪುರ ಕೆರೆ ಮತ್ತು ಸದೇನಹಳ್ಳಿ ಕೆರೆ (Ittgalpura and Sadenahalli lakes) ಮರು ಅಭಿವೃದ್ಧಿ ಕಾರ್ಯವು ಮುಕ್ತಾಯ ಹಂತ ತಲುಪಿದೆ. ಕಣ್ಣೂರು ಕೆರೆಯಲ್ಲಿ ನಾಗರಿಕರಿಗೆ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಸಿಬಿಯು ಕಳೆದ ಅಕ್ಟೋಬರ್‌ನಿಂದಲೇ ಇಎಸ್‌ಜಿ ಬದ್ಧತೆಯಡಿಯಲ್ಲಿ ಕೆರೆ ಸುಧಾರಣೆ ಕಾರ್ಯ ಯೋಜನೆಯನ್ನು ಆರಂಭಿಸಿದೆ. ಕಾವೇರಿ ನೀರಿನಿಂದ ವಂಚಿತವಾಗಿರುವ ಹಾಗೂ ಅಂತರ್ಜಲ ಮತ್ತು ಮಳೆ ನೀರಿನ ಮೂಲದ ಮೇಲೆಯೇ ಅವಲಂಬಿತವಾಗಿರುವ ಪ್ರದೇಶಗಳ ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿಯೂ ಇದಾಗಿದೆ.

ಇಟ್ಟಗಾಲಪುರ ಮತ್ತು ಸದೇನಹಳ್ಳಿ ಕೆರೆಗಳಿಂದ ಇದುವರೆಗೆ 1.20 ಲಕ್ಷ ಟನ್ ಹೂಳು (Silt) ಮತ್ತು ಮರಳನ್ನು ಹೊರತೆಗೆಯಲಾಗಿದೆ. ಅದೇ ಮಣ್ಣನ್ನು ಕೆರೆಗಳಿಗೆ ಒಡ್ಡು ಕಟ್ಟಲು ಮತ್ತು ಕಾಲುಹಾದಿ ನಿರ್ಮಿಸಲು ಬಳಸಲಾಗಿದೆ. ಅಲ್ಲದೇ ಸುತ್ತಮುತ್ತಲಿಗೆ 52 ರೈತರು ತಮ್ಮ ಹೊಲ. ಗದ್ದೆಗಳಿಗಾಗಿ ಈ ಮಣ್ಣು ತೆಗೆದುಕೊಂಡೂ ಹೋಗಿದ್ದಾರೆ ಎಂದು ಆರ್‌ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ಸಮುದಾಯಗಳ ಕಲ್ಯಾಣ ನಮ್ಮ ಗುರಿಯಾಗಿದೆ. ಬೆಂಗಳೂರಿನ ಪ್ರಮುಖ ಕೆರೆಗಳನ್ನು ಮರಳಿ ಅಭಿವೃದ್ಧಿಪಡಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಲಿದೆ. ಅಲ್ಲದೇ ಅಕ್ಕಪಕ್ಕದ ಗ್ರಾಮಗಳಿಗೆ ಕೃಷಿ ಮತ್ತಿತರ ಕಾರ್ಯಗಳಿಗೂ ನೀರಿನ ಸೌಲಭ್ಯ ಒದಗಿಸಲಿದೆ ಎಂದು ಆರ್‌ಸಿಬಿ ಮುಖ್ಯಸ್ಥ ರಾಜೇಶ್ ಮೆನನ್ ಹೇಳಿದ್ದಾರೆ. ಇದನ್ನೂ ಓಧಿ: ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

ಹಸಿರು ಬಣ್ಣದ ಜೆರ್ಸಿಯಲ್ಲಿ ಗೆಲುವಿಗಿಂತ ಸೋಲೆ ಹೆಚ್ಚು:
2011ರ ಐಪಿಎಲ್‌ ಆವೃತ್ತಿಯಿಂದ ಆರ್‌ಸಿಬಿ ಋತುವಿನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ಧರಿಸಿ ಆಡಲು ಆರಂಭಿಸಿತು. ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿತ್ತು. 2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓಧಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್

Share This Article