ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
1 Min Read

ಬೆಂಗಳೂರು: ಮಂಗಳವಾರ ನಡೆಯಲಿರುವ ಐಪಿಎಲ್‌ (IPL 2025) ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ (RCB) ಗೆಲುವಿಗೆ ಕೇಂದ್ರ ಸಚಿವ ಹೆಚ್‌ಡಿಕೆ (H.D Kumaraswamy), ಡಿಸಿಎಂ ಡಿಕೆಶಿ (D.K Shivakumar), ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಕುಮಾರಸ್ವಾಮಿಯವರು ಐಪಿಎಲ್‌ ಫೈನಲ್‌ ಪಂದ್ಯದ ಬಗ್ಗೆ ಮಾತಾಡಿ, ಅಭಿಮಾನಿಗಳಿಗೆ ಆರ್‌ಸಿಬಿ ಗೆಲ್ಲಬೇಕೆಂಬ ನಿರೀಕ್ಷೆ ಇದೆ. ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ನಮ್ಮ ಕನ್ನಡದ ತಂಡ ಈ ಬಾರಿ ಕಪ್ ಗೆಲ್ಲುತ್ತೆ. ಈ ಸಲ್ ಕಪ್ ನಮ್ದೆ ಎಂದು ಜೋಶ್‌ನಿಂದ ಹೇಳಿಕೊಂಡಿದ್ದಾರೆ. ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ನಾನು ಕಿಕೆಟ್‌ನ ದೊಡ್ಡ ಅಭಿಮಾನಿ, ಈ ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಆಟಗಾರರಿಗೆ ದೇವರು ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡ್ತೀನಿ. ಈ ಬಾರಿ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ತುಂಬಾ ಚೆನ್ನಾಗಿ ಆಡಿದ್ದಾರೆ. ತಾಯಿ ಚಾಮುಂಡೇಶ್ವರಿಯಲ್ಲಿ ನಾನು ವಿಶೇಷ ಪ್ರಾರ್ಥನೆ ಮಾಡುತ್ತೇನೆ. ಈ ಸಲ ಕಪ್ ನಮ್ದೇ ಎಂದಿದ್ದಾರೆ. ಇದನ್ನೂ ಓದಿ: ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

ವಿಪಕ್ಷ ನಾಯಕ ಆರ್‌.ಅಶೋಕ್‌ ಮಾತನಾಡಿ, ಹಲವಾರು ವರ್ಷಗಳ ನಂತರ ಆರ್‌ಸಿಬಿ ಫೈನಲ್‌ಗೆ ಬಂದಿದೆ. ಕಪ್‌ ಗೆಲ್ಲಲಿ ಎಂಬುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಆರ್‌ಸಿಬಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್‌ ಸಹ ಆರ್‌ಸಿಬಿ ಗೆಲುವಿಗೆ ಶುಭ ಹಾರೈಸಿದ್ದಾರೆ.

ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, ಆರ್‌ಸಿಬಿ ಈ ಬಾರಿ ಐಪಿಎಲ್ ಮ್ಯಾಚ್ ಗೆದ್ದೇ ಗೆಲ್ಲುತ್ತೆ. ಈ ಹಿಂದೆ ತಪ್ಪು ಮಾಡಿದ್ದೇವೆ. ಈಗ ತಪ್ಪು ಆಗೋದಿಲ್ಲ, ಈ ಸಲ ಕಪ್ ನಮ್ಮದೇ ಎಂದಿದ್ದಾರೆ. ಇದನ್ನೂ ಓದಿ:  ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Share This Article