-ಇಸ್ರೇಲ್ನಲ್ಲಿ 18 ಕನ್ನಡಿಗರು ಸೇಫ್
ಟೆಲ್ ಅವಿವ್/ಟೆಹ್ರಾನ್: ಇರಾನ್ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇರಾನ್ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳನ್ನೇ ಇಸ್ರೇಲ್ ಟಾರ್ಗೆಟ್ ಮಾಡಿಕೊಂಡಿದೆ.
ಇರಾನ್-ಇಸ್ರೇಲ್ ಕದನ ಮೂರನೇ ದಿನಕ್ಕೆ ತಲುಪಿದ್ದು, ದಾಳಿ ಪ್ರತಿದಾಳಿಯ ಭೀಕರತೆ ಹೆಚ್ಚಾಗಿದೆ. ಇಸ್ರೇಲ್ ದಾಳಿಯಿಂದಾಗಿ 400ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 600ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ. ಇರಾನ್ ರಾಜಧಾನಿ ಟೆಹ್ರಾನ್ನ ಶಹರಾನ್ ತೈಲ ಸಂಗ್ರಹಣಾ ಘಟಕ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ಇಸ್ರೇಲ್ನ ಈ ಭೀಕರ ದಾಳಿಯಿಂದ ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರ ಸೌತ್ ಪಾರ್ಸ್ನಲ್ಲಿ ಅನಿಲ ಉತ್ಪಾದನೆಯನ್ನ ಇರಾನ್ ಸ್ಥಗಿತಗೊಳಿಸಿದೆ.ಇದನ್ನೂ ಓದಿ: ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್
ಇಸ್ರೇಲ್ನ ದಾಳಿಗೆ ಪ್ರತಿದಾಳಿ ಆರಂಭಿಸಿದ ಇರಾನ್ ರಾತ್ರಿಯಿಡಿ ಸೆಂಟ್ರಲ್ ಟೆಲ್ ಅವೀವ್ ನಗರದ ಮೇಲೆ ನೂರಾರು ಡ್ರೋನ್, ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ನಡೆಸಿದೆ. ಜೊತೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿವಾಸದ ಮೇಲೂ ಕ್ಷಿಪಣಿ ದಾಳಿ ನಡೆಸಿದ್ದು, ಸ್ವಲ್ಪದರಲ್ಲೇ ಪ್ರಧಾನಿ ಬಚಾವ್ ಆಗಿದ್ದಾರೆ.
ಇಂದು ಇಸ್ರೇಲ್ ಪ್ರಧಾನಿಯ ಪುತ್ರ ಅವ್ನೇರ್ ನೆತಾನ್ಯಾಹುನ ಮದುವೆ ಇತ್ತು. ಯುದ್ಧದ ಸಮಯದಲ್ಲಿ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, ಮದುವೆಯನ್ನು ಮುಂದೂಡಲಾಗಿದೆ. ಇನ್ನೂ ಇಸ್ರೇಲ್ನ ಟೆಲ್ ಅವೀವ್ ನಗರದ ಕಟ್ಟಡಗಳು ಧ್ವಂಸಗೊAಡಿದ್ದು, ಪುಟ್ಟ ಕಂದಮ್ಮಗಳನ್ನ ಉಳಿಸಲು ಇಸ್ರೇಲ್ನ ರಕ್ಷಣಾ ಪಡೆಗಳು ನಿರಂತರ ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ. ಸದ್ಯ ಮುಂದಿನ 15 ದಿನಗಳ ಕಾಲ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಇಸ್ರೇಲ್ನಲ್ಲಿ 18 ಕನ್ನಡಿಗರು ಸೇಫ್:
ಇಸ್ರೇಲ್ನ ಟೆಲ್ ಅವೀವ್ ನಗರದಲ್ಲಿ 18 ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಸದ್ಯಕ್ಕೆ ಹೊಟೇಲ್ ಒಂದರಲ್ಲಿ ಸೇಫ್ ಆಗಿದ್ದಾರೆ. ಅಧ್ಯಯನ ಪ್ರವಾಸಕ್ಕೆ ಹೋಗಿದ್ದ ತಂಡದ ಜೊತೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿದ್ದು, ಧೈರ್ಯ ತುಂಬಿದ್ದಾರೆ. ಇಸ್ರೇಲ್ನ ಜೇರುಸೇಲಂ ನಗರದಲ್ಲಿಯೂ ಮಂಗಳೂರು ಮೂಲದ ಹಲವರು ಕೆಲಸ ಮಾಡ್ತಿದ್ದು, ಮಿಸೈಲ್, ಡ್ರೋನ್ ದಾಳಿಯ ನಡುವೆ ಬಂಕರ್ಗಳಲ್ಲಿ ಸುರಕ್ಷಿತವಾಗಿದ್ದಾರೆ. ಮೂರು ದಿನಗಳಿಂದ ನಡೆಯುತ್ತಿರುವ ಯುದ್ಧ ಮತ್ತಷ್ಟು ರಕ್ತಸಿಕ್ತ ಸಂಘರ್ಷಕ್ಕೆ ನಾಂದಿ ಹಾಡುವಂತಿದೆ.ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು