ಸೋಮವಾರದಿಂದ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್

Public TV
1 Min Read

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ ಡಿಕೆಶಿ ಮತ್ತು ಅವರ ಕುಟುಂಬಕ್ಕೆ ಸಮನ್ಸ್ ಜಾರಿಯಾಗಿದೆ.

ನಾಳೆಯಿಂದ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಈ ಸಮನ್ಸ್ ಜಾರಿ ಮಾಡಿದ್ದಾರೆ. ಆದ್ರೆ, ವೈಯುಕ್ತಿಕ ಕೆಲಸಗಳು ಇದ್ದಾವೆ ಅಂತ ಡಿಕೆಶಿ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದಾರೆ. ಅವರ ಈ ಬೇಡಿಕೆಗೆ ಐಟಿ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬುವುದಾಗಿ ತಿಳಿದುಬಂದಿದೆ.

ಡಿಕೆಶಿ ಗುರುಗಳಾದ ದ್ವಾರಕನಾಥ್‍ಗೂ ಸಮನ್ಸ್ ಜಾರಿ ಮಾಡಿದ್ದು, ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ದ್ವಾರಕನಾಥ್ ಸೋಮವಾರ ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *