ಮುನಿರತ್ನಗೆ ಗೆಲುವು ಜನರು ಕೊಟ್ಟಿದ್ದಲ್ಲ, ಅಧಿಕಾರಿಗಳು ಕೊಟ್ಟಿದ್ದು- ಶೆಟ್ಟರ್

Public TV
1 Min Read

ಧಾರವಾಡ: ಮುನಿರತ್ನ ಅವರಿಗೆ ಇದು ಜನರು ಕೊಟ್ಟ ಗೆಲ್ಲುವಲ್ಲ, ಅಧಿಕಾರಿಗಳು ಕೊಟ್ಟ ಗೆಲುವು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರು ಗೆಲುವು ಸಾಧಿಸಲು ಕಾಂಗ್ರೆಸ್ ಅಧಿಕಾರಿಗಳನ್ನು ದುರುಪಯೋಗ ಪಡೆಸಿಕೊಂಡಿದೆ ಎಂದು ಆರೋಪಿಸಿದರು.

ಐಟಿ ಅಧಿಕಾರಿಗಳು ಸೂಕ್ತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸುತ್ತಾರೆ. ಉದ್ದೇಶಪೂರ್ವಕವಾಗಿ ದಾಳಿ ಮಾಡುವುದಿಲ್ಲ. ಕೆಲವರು ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ, ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎನ್ನುವ ಆರೋಪ ವ್ಯಕ್ತಪಡಿಸುತ್ತಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನು ಹದಿನೈದು ದಿನ ಕಳೆದರೂ ರೈತರ ಸಾಲ ಮನ್ನಾ ಮಾಡುವುದಿಲ್ಲ. ಭರವಸೆ ನೀಡುತ್ತ ಸಮಸ್ಯೆಯಿಂದ ಪಲಾಯನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *