J&K | ಬೆಳ್ಳಂಬೆಳಗ್ಗೆ ಅವಘಡ – ಸಿಂಧ್ ನದಿಗೆ ಬಿದ್ದ ITBP ಯೋಧರನ್ನು ಕರೆದೊಯ್ಯುತ್ತಿದ್ದ ಬಸ್

By
1 Min Read

– ಕೆಲ ಶಸ್ತ್ರಾಸ್ತ್ರಗಳು ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಗಂಡೇರ್ಬಲ್‌ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಐಟಿಬಿಪಿ (Indo Tibetan Border Police) ಯೋಧರನ್ನು ಕರೆದೊಯ್ಯುತ್ತಿದ್ದ ಬಸ್‌ ಭಾರೀ ಮಳೆಯ ನಡುವೆ ಸಿಂಧ್‌ ನದಿಗೆ ಉರುಳಿ ಬಿದ್ದಿದೆ.

ಈಗಾಗಲೇ ಎಸ್‌ಡಿಆರ್‌ಎಫ್‌ (SDRF) ತಂಡ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಸಂಬಂಧಪಟ್ಟ ಸಂಸ್ಥೆಗಳೂ ನೆರವಿಗೆ ಧಾವಿಸಿವೆ.‌ ಭಾರೀ ಮಳೆಯ ಹಿನ್ನೆಲೆ ದುರಂತ ಸಂಭವಿಸಿದ್ದು, ಕೆಲವು ಶಸ್ತ್ರಾಸ್ತ್ರಗಳು ನಾಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಶ್ವದ ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹ ಇಂದು ನಭಕ್ಕೆ; ಭಾರತ-ಅಮೆರಿಕ ಮಹತ್ವದ ಹೆಜ್ಜೆ

ರಕ್ಷಣಾ ತಂಡಗಳ ಹುಡುಕಾಟದ ವೇಲೆ ಈವರೆಗೆ ಮೂವರು ಶಸ್ತ್ರಾಸ್ತ್ರಗಳು ಸಿಕ್ಕಿವೆ. ಇನ್ನುಳಿದ ಶಸ್ತ್ರಾಸ್ತ್ರಗಳಿಗೆ ಹುಡುಕಾಟ ನಡೆಯುತ್ತಿದೆ. ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

Share This Article