ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

Public TV
1 Min Read

ಟ ಜಗ್ಗೇಶ್ ಅವರ ಪುತ್ರ ಯತೀಶ್ ಕಾರು ಆಕ್ಸಿಡೆಂಟ್ ಪ್ರಕರಣ ಸಖತ್ ಸುದ್ದಿ ಮಾಡಿತ್ತು. ಕಾರು ಅಪಘಾತ ಮಾಡಿಕೊಂಡಿದ್ದ ಯತೀಶ್ ಅಂದು ವರ್ತಿಸಿದ ರೀತಿ ಟ್ರೋಲ್ ಕೂಡ ಆಗಿತ್ತು. ಮತ್ತೆ ರಿಪೇರಿ ಆಗದೇ ಇರುವಷ್ಟು ಕಾರು ಕೂಡ ಡ್ಯಾಮೇಜ್ ಆಗಿತ್ತು. ಈ ಕುರಿತು ಮೊದಲ ಬಾರಿಗೆ ಜಗ್ಗೇಶ್ ಘಟನೆಯ ಕುರಿತು ಮಾತನಾಡಿದ್ದಾರೆ. ಅಂದು ನಡೆದ ಕಾರು ಅಪಘಾತಕ್ಕೆ ಕಾರಣ ಏನು ಎನ್ನುವುದನ್ನು ಜಗ್ಗೇಶ್ ತಿಳಿಸಿದ್ದಾರೆ.

ಜಗ್ಗೇಶ್ ಸಹೋದರ ಕೋಮಲ್ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗುತ್ತಿರುವ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಗ್ಗೇಶ್, ‘ನನ್ನ ಮಗನಿಗೆ ಬುಧಭುಕ್ತಿ ಇತ್ತು. ಹಾಗಾಗಿ ಹುಷಾರಿಂದ ಇರುವಂತೆ ಅವನಿಗೆ ಹೇಳಿದ್ದೆ. ಕೋವಿಡ್ ಸಂದರ್ಭಲ್ಲಿ ಯತೀಶ್ ಎಲ್ಲಿಯೂ ಹೋಗುತ್ತಿರಲಿಲ್ಲ. ಭಯದಿಂದ ಮನೆಯಲ್ಲೇ ಇರುತ್ತಿದ್ದ. ಅವತ್ತು ಎ.ಆರ್.ಬಾಬು ಪುತ್ರನಿಗೆ ಕಾಲ್ ಮಾಡಿ, ಬಿರಿಯಾನಿ ಮಾಡಿಸು ಎಂದು ಹೇಳಿ ಹೊರಟ. ಬುಧಭುಕ್ತಿ ಇರುವ ಕಾರಣಕ್ಕಾಗಿಯೇ ಕಾರು ಅಪಘಾತ ಆಯಿತು’ ಎಂದು ಜಗ್ಗೇಶ್ ಮಾತನಾಡಿದ್ದಾರೆ. ಇದನ್ನೂ ಓದಿ:‘ಲೈಗರ್’ ಸಿನಿಮಾಗೆ ಹಣ ಎಲ್ಲಿಂದ ಬಂತು?: ನಟಿ, ನಿರ್ದೇಶಕನಿಗೆ ‘ಇಡಿ’ ಗ್ರಿಲ್

‘ಕೋಮಲ್ ಗೆ ಕೇತುದೆಸೆ ಇತ್ತು. ಈ ವೇಳೆಯಲ್ಲಿ ಏನೇ ಕೆಲಸ ಮಾಡಿದರೂ, ಅದರಲ್ಲಿ ಯಶಸ್ಸು ಕಾಣುವುದಿಲ್ಲೆ ಎ‍ನ್ನುವುದು ಗೊತ್ತಿತ್ತು. ಹಾಗಾಗಿ ನಾನೇ ಸಿನಿಮಾ ಮಾಡಬೇಡ ಅಂತ ಕೋಮಲ್ ಗೆ ಹೇಳಿದ್ದೆ. ಇದೀಗ ಕೇತುದೆಸೆ ಕಳೆದಿದೆ. ಇನ್ಮುಂದೆ ಕೋಮಲ್ ಸಿನಿಮಾಗಳು ಹಿಟ್ ಆಗುತ್ತವೆ. ಸಿನಿಮಾ ರಂಗದಲ್ಲಿ ಮತ್ತೆ ಕೋಮಲ್ ಅಗಾಧವಾಗಿ ಬೆಳೆಯುತ್ತಾರೆ ಎಂದು ತಮ್ಮನ ಬಗ್ಗೆ ಮಾತನಾಡಿದರು ಜಗ್ಗೇಶ್.

ಕೋಮಲ್ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ಆಗಿದೆ. ಅಲ್ಲದೇ, ಕೋಮಲ್ ನಟನೆಯ ನಮೋ ಭೂತಾತ್ಮ ಸಿನಿಮಾ ಭಾಗ 2 ಆಗಿ ಮೂಡಿ ಬರಲಿದೆಯಂತೆ. ಅಲ್ಲದೇ, ಕೋಮಲ್ ಗೆ ಸಿನಿಮಾ ಮಾಡಲು  ಅನೇಕರು ತುದಿಗಾಲಲ್ಲಿ ನಿಂತಿದ್ದಾರೆ. ಕೋಮಲ್ ಮತ್ತೆ ಸಿನಿಮಾ ರಂಗದಲ್ಲಿ ಬ್ಯುಸಿ ಆಗುವುದರಲ್ಲಿ ಅನುಮಾನವಿಲ್ಲ ಅಂತಾರೆ ಜಗ್ಗೇಶ್.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *