ಆಜಾನ್ ವಿರೋಧಿಸಿ ಜಮ್ಮು ಕಾಲೇಜು ವಿದ್ಯಾರ್ಥಿಗಳಿಂದ ಹನುಮಾನ್ ಚಾಲೀಸಾ ಪಠಣ

Public TV
1 Min Read

ಶ್ರೀನಗರ: ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಕೂಗುವುದನ್ನು ವಿರೋಧಿಸಿ ಜಮ್ಮುವಿನ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದಾರೆ.

ಇಲ್ಲಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದು, ಬಳಿಕ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: 1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ – ಸಮುದ್ರದಲ್ಲಿ ಚೇಸಿಂಗ್ ವೀಡಿಯೋ ನೋಡಿ

LOUDSPEAKER (1)

ತರಗತಿಯಲ್ಲಿ ಕಲಿಕೆಗೆ ಮಸೀದಿಯ ಧ್ವನಿವರ್ಧಕದ ಸದ್ದು ಅಡಚಣೆ ಮಾಡುತ್ತಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿರುವ ನದಿಗಳ ಮರಳನ್ನು ಮಾರುವಂತಿಲ್ಲ: ಎನ್‌ಜಿಟಿ

ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮತ್ತು ಅದನ್ನು ತಡೆಯುವಲ್ಲಿ ಸ್ಥಳೀಯಾಡಳಿತ ವಿಫಲವಾಗಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

loudspeakers

ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (JMC) ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವ ನಿರ್ಧಾರ ಪ್ರಕಟಿಸಿದ ಕೆಲ ದಿನಗಳ ನಂತರ ಈ ಘಟನೆ ನಡೆದಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಸರ್ಕಾರಿ ಕಚೇರಿ, ಶಾಲೆ – ಕಾಲೇಜುಗಳು ಬಂದ್‌

ಬಿಜೆಪಿ ಕೌನ್ಸಿಲರ್ ನರೋತ್ತಮ್ ಶರ್ಮಾ ಈ ನಿರ್ಣಯ ಮಂಡಿಸಿದ್ದರು. ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಜಮ್ಮುವಿನ ಧಾರ್ಮಿಕ, ಸಾರ್ವಜನಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದರು. ಬಹುಮತದೊಂದಿಗೆ ಈ ನಿರ್ಣಯ ಅಂಗೀಕರಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *