ಜನಶಕ್ತಿಯೇ ಸರ್ವಶ್ರೇಷ್ಠ – ಅಭಿವೃದ್ಧಿ, ಉತ್ತಮ ಆಡಳಿತ ಗೆಲ್ಲುತ್ತದೆ: ಮೋದಿ

By
1 Min Read

ನವದೆಹಲಿ: ಬಿಜೆಪಿಗೆ (BJP) ನೀಡಿದ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿಕೊಂಡಿದ್ದಾರೆ.

ದೆಹಲಿ ಚುನಾವಣೆಯಲ್ಲಿ ( Delhi Election) ಪಕ್ಷ ಬಹುಮತ ಪಡೆದ ವಿಚಾರವಾಗಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ನಲ್ಲಿ ದೆಹಲಿಯನ್ನು ಅಭಿವೃದ್ಧಿಗೆ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಣೆಗೆ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಯು ಪ್ರಮುಖ ಪಾತ್ರವಹಿಸುತ್ತದೆ. ಜನಶಕ್ತಿಯೇ ಸರ್ವಶ್ರೇಷ್ಠವಾದದ್ದು, ಅಭಿವೃದ್ಧಿ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ಪಕ್ಷದ ಕಾರ್ಯಕರ್ತರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವರು ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾಗಿದ್ದಾರೆ. ನಾವು ಇನ್ನೂ ಹೆಚ್ಚು ಹುರುಪಿನಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಜನರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಕಳೆದ 2 ಅವಧಿಯಲ್ಲಿ ಆಡಳಿತ ನಡೆಸಿದ್ದ ಎಎಪಿ (AAP) ಅಧಿಕಾರ ಕಳೆದುಕೊಂಡಿದೆ. 27 ವರ್ಷಗಳ ನಂತರ ಬಿಜೆಪಿ ದೆಹಲಿಯಲ್ಲಿ ಗೆಲುವು ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ (Congress) ಸತತ ಮೂರನೇ ಭಾರಿಗೆ ಯಾವುದೇ ಕ್ಷೇತ್ರಗಳನ್ನೂ ಗೆಲ್ಲದೇ ಶೂನ್ಯ ಸಾಧನೆ ಮಾಡಿದೆ.

Share This Article