ಚುಂಚನಗಿರಿಯಲ್ಲಿ ಅದ್ಧೂರಿ ರಥೋತ್ಸವ

Public TV
0 Min Read

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಇಂದು ಮುಂಜಾನೆ ಅದ್ಧೂರಿಯಾಗಿ ಕಾಲಭೈರವೇಶ್ವರ ರಥೋತ್ಸವ ನಡೆಯಿತು.

ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು. ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.

Share This Article
Leave a Comment

Leave a Reply

Your email address will not be published. Required fields are marked *