ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ

Public TV
1 Min Read

ಮಂಡ್ಯ: ಕಾಂಗ್ರೆಸ್ ಆಯ್ತು ಜೆಡಿಎಸ್ ನಲ್ಲಿ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಸಿಎಸ್ ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಿ ಜಿಲ್ಲೆಯಲ್ಲಿ ಪಕ್ಷಕ್ಕೆ ಏನು ಮಾಡದ ಡಿಸಿ ತಮ್ಮಣ್ಣಗೆ ಸಾರಿಗೆ ಖಾತೆ ಕೊಟ್ಟಿರುವುದು ಪುಟ್ಟರಾಜು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ

ಸಣ್ಣ ನೀರಾವರಿ ಖಾತೆ ಸಿಕ್ಕಿದ ಹಿನ್ನೆಲೆಯಲ್ಲಿ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿಯನ್ನು ಪಡೆಯಿರಿ ಎಂದು ಪುಟ್ಟರಾಜು ಅವರಿಗೆ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ಇದೇ ವಿಚಾರವಾಗಿ ನಾಳೆ ಪುಟ್ಟರಾಜು ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಕುತೂಹಲ ಹೆಚ್ಚಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಪುಟ್ಟರಾಜು ಚುನಾವಣೆಯಲ್ಲಿ ಜಿಲ್ಲೆಯ ಹೊಣೆ ಹೊತ್ತಿದ್ದರು. ಆದರೆ ಪಕ್ಷ ಸಂಘಟನೆಗೆ ಏನು ಮಾಡದ ಡಿಸಿ ತಮ್ಮಣ್ಣ ಅವರಿಗೆ ಸಾರಿಗೆ ಖಾತೆಯನ್ನು ನೀಡಿದ್ದಕ್ಕೆ ಪುಟ್ಟರಾಜು ಬೆಂಬಲಿಗರು ಆಕ್ರೋಶಗೊಂಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *