ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ

Public TV
1 Min Read

ಬೆಂಗಳೂರು: ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.

ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

 

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್