ಮೋದಿಯನ್ನು ಹಾಡಿ ಹೊಗಳಿದ ಜೆಡಿಎಸ್ ಶಾಸಕ

Public TV
1 Min Read

ತುಮಕೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೋದಿ ಅವರ ಬಗ್ಗೆ ಈ ದೇಶದಲ್ಲಿ ಒಂದು ಒಳ್ಳೆಯ ಹೆಸರಿದೆ. ದೇಶ ಅಭಿವೃದ್ಧಿ ಮಾಡುವ ಒಳ್ಳೆಯ ಅಜೆಂಡಾ ಇಟ್ಟುಕೊಂಡು ಮುನ್ನಡೆಯುತ್ತಿದ್ದಾರೆ. ದೇಶದ ಬಗೆಗಿನ ಅವರ ದೃಷ್ಟಿಕೋನ ಒಳ್ಳೆಯದಿದೆ” ಎಂದು ಗುಣಗಾನ ಮಾಡಿದ್ದಾರೆ. ಅಲ್ಲದೆ ಬಿಜೆಪಿಯಲ್ಲಿನ ಕೆಲ ನಾಯಕರಿಂದ ಆ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಕಾಳಜಿ ವ್ಯಕ್ತಪಡಿಸಿದ್ದಾರೆ.

ಮಾಜಿ ಶಾಸಕ ಸುರೇಶ್ ಗೌಡ ಅಂತಹವರಿಂದ ಬಿಜೆಪಿಗೆ ಕೆಟ್ಟ ಹೆಸರು ಬರುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ರಸ್ತೆ ಕಾಮಗಾರಿಗೆ ಬಿಡುಗಡೆಯಾದ ಹಣವನ್ನು ತಡೆ ಹಿಡಿಯುವಂತೆ ಸುರೇಶ್ ಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇವರ ಪತ್ರಕ್ಕೆ ಮನ್ನಣೆ ಕೊಟ್ಟು ಹಣವನ್ನು ತಡೆ ಹಿಡಿಯಲಾಗಿದೆ.

ಸುರೇಶ್ ಗೌಡ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ. ಇಂತಹವರಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗುತ್ತಿದೆ. ಈ ಕುರಿತು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ರಾಜ್ಯಪಾಲರಿಗೂ ನಾನು ಟ್ವೀಟ್ ಮಾಡಿ ವಿಚಾರ ತಿಳಿಸುತ್ತೆನೆ ಎಂದು ಸುರೇಶ್ ಗೌಡರ ವಿರುದ್ಧ ಗೌರಿಶಂಕರ ವಾಗ್ದಾಳಿ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *