ಸಚಿವ ರೇವಣ್ಣಗೆ ಜೆಡಿಎಸ್ ಶಾಸಕ ಅವಾಜ್..!

Public TV
1 Min Read

ಹಾಸನ: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇ ಗೌಡ ಇಂದು ಅವಾಜ್ ಹಾಕಿದ್ದಾರೆ.

ಹಾಸನ ಕೆಡಿಪಿ ಸಭೆಯಲ್ಲಿ ರೇವಣ್ಣ ಹಾಗೂ ಶಿವಲಿಂಗೇ ಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಕುಡಿಯುವ ನೀರಿನ ಟ್ಯಾಂಕರ್ ಗೆ ಬಿಲ್ ಮಂಜೂರು ವಿಚಾರದಲ್ಲಿ ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ.

ಬಿಲ್ ಮಂಜೂರಿಗೂ ಮುನ್ನ ರೇವಣ್ಣ ಅವರು ಥರ್ಡ್ ಪಾರ್ಟಿ ವಿಚಾರಣೆ ಮಾಡಿ ಟ್ಯಾಂಕರ್ ಗಳಲ್ಲಿ ನೀರು ಕೊಟ್ಟು ಬಿಲ್ ಮಾಡಬೇಡಿ. ಬೋರ್ ವೆಲ್ ತೆಗೆಸಿ ಎಂದು ಹೇಳಿದ್ದಾರೆ. ಇದರಿಂದ ಸಿಟ್ಟುಗೊಂಡ ಶಾಸಕರು, ಅಣ್ಣೋ.. ನನ್ನ ಮೇಲೆ ಅನುಮಾನ ಪಡುತ್ತಿದ್ದೀರಾ. ನಾನು 227 ಹಳ್ಳಿಗಳೀಗೆ ಟ್ಯಾಂಕರ್ ಗಳಲ್ಲಿ ನೀರು ಕೊಡಿಸಿದ್ದೀನಿ ಎಂದು ಯಾವನೋ ಹೇಳಿದ್ದು ಎಂದು ಏರು ಧ್ವನಿಯಲ್ಲೇ ಪ್ರಶ್ನಿಸಿದ್ದಾರೆ.

ಅಲ್ಲದೆ ನಾನು ಒಂದು ರೂಪಾಯಿ ಹಣ ದುರುಪಯೋಗ ಮಾಡಿಲ್ಲ. ಅಧಿಕಾರಿಗಳೇನು ದನ ಕಾಯೋಕೆ ಹೋಗಿದ್ದೀರಾ. ಎಂದು ಮತ್ತೆ ಪ್ರಶ್ನಿಸಿದ ಶಾಸಕರು ಯಾರು ಹಣ ದುರುಪಯೋಗ ಮಾಡಿದ್ದಾರೆ ಅವರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಿ ಎಂದು ಅವಾಜ್ ಹಾಕಿದ್ದಾರೆ. ಶಿವಲಿಂಗೇಗೌಡ ಮಾತಿಗೆ ಸಚಿವ ರೇವಣ್ಣ ಅವರು ಒಂದು ಬಾರಿ ತಬ್ಬಿಬ್ಬಾಗಿದ್ದಾರೆ. ಬಳಿಕ ಆಯ್ತು ಶಿವಲಿಂಗಣ್ಣ ಪಾಪ ನಾಲ್ಕು ವರ್ಷದಿಂದ ಕಷ್ಟಪಟ್ಟಿದ್ದಾನೆ ಬಿಲ್ ಕೊಡಿ ಎಂದು ಅಧಿಕಾರಿಗಳಿಗೆ ರೇವಣ್ಣ ಅವರು ಸೂಚಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *