ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ

Public TV
1 Min Read

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡ ಮತದಾನ ನಡೆದಿದೆ. ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ.

ಜೆಡಿಎಸ್‌ನಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡುತ್ತಾರೆ ಎಂಬ ವಿಚಾರ ಮೊದಲೇ ಸಿಕ್ಕಿತ್ತು. ಆದರೆ ಯಾರು ಅಡ್ಡ ಮತದಾನ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯವಾಗಿತ್ತು.

ಎಚ್‌ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಅವರು ಬೆಳಗ್ಗೆಯೇ ಶ್ರೀನಿವಾಸ ಗೌಡರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಗೆಲ್ಲುವುದಕ್ಕೆ ಚಾನ್ಸ್ ಇಲ್ಲ: ಆರ್. ಅಶೋಕ್

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಬೆಳಗ್ಗೆ ಶ್ರೀನಿವಾಸ ಗೌಡರ ಮನೆಗೆ ಹೋಗಿ ಕೊನೆಯ ಹಂತದ ಮಾತುಕತೆ ನಡೆಸಿದ್ದರು. ಇದನ್ನೂ ಓದಿ: ಬಿಜೆಪಿ ಜೊತೆ ಡೀಲ್, ಸಿದ್ದರಾಮಯ್ಯ ಬಣ್ಣ ಬಯಲಾಯ್ತು: ಹೆಚ್‌ಡಿಕೆ ಬಾಂಬ್

ಮತದಾನಕ್ಕೂ ಮೊದಲು ನಾನು ಯಾರಿಗೆ ಮತ ಹಾಕುತ್ತೇನೆ ಎನ್ನುವುದನ್ನು ಈಗ ತಿಳಿಸುವುದಿಲ್ಲ ಎಂದಿದ್ದ ಶ್ರೀನಿವಾಸ ಗೌಡ ಮತ ಹಾಕಿದ ಬಳಿಕ ನೇರವಾಗಿ ಕಾಂಗ್ರೆಸ್ ಶಾಸಕರಿದ್ದ ಕಚೇರಿಗೆ ತೆರಳಿದರು.

Share This Article
Leave a Comment

Leave a Reply

Your email address will not be published. Required fields are marked *