13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ

Public TV
1 Min Read

ಹುಬ್ಬಳ್ಳಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ, ನಿಮಗೆ ನಾಚಿಕೆ ಆಗಬೇಕು ಎಂದು ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ (Ramesh Jarkiholi) ಸಿ.ಡಿ ತಗೊಂಡು ಗೃಹಸಚಿವರ ಹತ್ರ ಹೋಗಿದ್ದಾರೆ, ವಿಷಕನ್ಯೆ ಬಗ್ಗೆ ಮಾತಾಡ್ತಾರೆ. ಕಟೀಲು ಪಿಟೀಲು ಬಾರಿಸಿ ಲವ್ ಜಿಹಾದ್ (Love Jihad) ಬಗ್ಗೆ ಮಾತಾಡ್ತಾನೆ. ಬೊಮ್ಮಾಯಿ ಇಂತಹ ಪಾಪಿಗಳನ್ನು ಕಟ್ಟಿಕೊಂಡು ಸಿಎಂ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗೆ ಲಿಂಕ್ – 200ಕ್ಕೂ ಅಧಿಕ ಸಾಲ, ಬೆಟ್ಟಿಂಗ್ ಆ್ಯಪ್‌ಗಳನ್ನು ಬ್ಯಾನ್ ಮಾಡಲಿದೆ ಭಾರತ

ಮಂಚ ಮುರಿಯೋದೇ ಅಚ್ಚೇ ದಿನವಾ?: ಸದಾನಂದಗೌಡ ಸೇರಿ 12 ಜನರ ಸಿ.ಡಿ ಹೊರಗೆ ತರಬೇಕು. ಇಲ್ಲದಿದ್ದರೇ ಬಿಜೆಪಿ ನಾಯಕರು ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಸ್ಯಾಂಟ್ರೋ ರವಿ ಈಗ ಎಲ್ಲಿದ್ದಾನೆ? ಅವನ ಬಗ್ಗೆ ಸುದ್ದಿನೇ ಇಲ್ಲ. ಮಂಚ ಮುರಿಯೋದೆ ಅಚ್ಚೇ ದೀನ್ ನಾ? ಇದಕ್ಕೆ ಮೋದಿ (Narendra Modi) ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್

ಇದೇ ವೇಳೆ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿ, ಈ ಬಾರಿ ವರುಣಾದಲ್ಲಿ ಬಿ.ಎಸ್‌ ಯಡಿಯೂರಪ್ಪ ಇಲ್ಲದೇ ಸಿದ್ದರಾಮಯ್ಯ (Siddaramaiah) ಗೆಲ್ಲೋಕೆ ಆಗಲ್ಲ. ಆದ್ದರಿಂದ ಅವರು ಸಿದ್ದರಾಮಯ್ಯ ಕೋಲಾದರಲ್ಲಿ ನಿಲ್ಲಲ್ಲ ಎಂದಿದ್ದಾರೆ. ನಾನು ಸಹ ಕೋಲಾರ ಬೇಡ ಎಂದಿದ್ದೇನೆ. ಸಿದ್ದರಾಮಯ್ಯ, ಯಡಿಯೂರಪ್ಪ (BS Yediyurappa) ಇಬ್ಬರೂ ಒಂದೇ ಎಂದು ಅಭಿಪ್ರಾಯಪಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *