ಮೈತ್ರಿ ಸರ್ಕಾರದ ಸ್ಥಿರತೆ ಕುರಿತು ಅನುಮಾನ ವ್ಯಕ್ತಪಡಿಸಿದ ದೇವೇಗೌಡ್ರು!

Public TV
1 Min Read

ತುಮಕೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಸ್ತುತ ಮೈತ್ರಿ ಸರ್ಕಾರ 5 ವರ್ಷ ಪೂರೈಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ದೇವೇಗೌಡರು ಕೂಡಾ ಸರ್ಕಾರದ ಸ್ಥಿರತೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಪಾವಗಡ ತಾಲೂಕಿನ ತಾಳೆಮರದ ಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, 78 ಸ್ಥಾನ ಗಳಿಸಿದ್ದರೂ ಅವರು ನೀವೇ ಮುಖ್ಯಮಂತ್ರಿ ಆಗಬೇಕೆಂದು ಅಧಿಕಾರ ಕೊಟ್ಟಿದ್ದಾರೆ. ಈಗ ಕುಮಾರಸ್ವಾಮಿಗೆ ದೇವರು ಅಧಿಕಾರ ಕೊಟ್ಟು ಪರೀಕ್ಷಿಸುತ್ತಿದ್ದಾನೆ. ಹೆಜ್ಜೆಹೆಜ್ಜೆಗೂ ಸಂಕಷ್ಟ ಎದುರಾಗುತ್ತಿದೆ. ಈ ಎಲ್ಲಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ದೊಡ್ಡ ಹೋರಾಟವೇ ಮಾಡಬೇಕಿದೆ ಎಂದು ಮೈತ್ರಿ ಸರ್ಕಾರ ಮುನ್ನಡೆಸುವ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

ದೇವರ ಅನುಗ್ರಹದಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಹಾಗೇನೆ 38ಸ್ಥಾನ ಪಡೆದ ನಮಗೆ 78ಸ್ಥಾನ ಪಡೆದ ರಾಷ್ಟ್ರೀಯ ಪಕ್ಷ ಬೆಂಬಲ ನೀಡಿದರ ಹಿಂದೆ ದೇವರ ಕೃಪೆ ಇದೆ. ಆದರೂ ದೇವರು ಕ್ಷಣ ಕ್ಷಣಕ್ಕೂ ಪರೀಕ್ಷೆ ಒಡ್ಡುತ್ತಿದ್ದಾನೆ ಎಂದು ನೋವು ಹೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *