ನಾರಾಯಣಗೌಡ ರಾಜೀನಾಮೆಗೆ ಕಾರ್ಯಕರ್ತರ ಆಕ್ರೋಶ – ಕಚೇರಿ ಮುಂದಿದ್ದ ಬೋರ್ಡ್ ಧ್ವಂಸ

Public TV
1 Min Read

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು ಅಣಕು ಶವಯಾತ್ರೆ ನಡೆಸಿದ್ದಾರೆ.

ಇಂದು ಶಾಸಕರ ರಾಜೀನಾಮೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಯಾತ್ರೆಯನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕ ನಿವಾಸದ ಬಳಿ ಆಗಮಿಸಿದ ಕಾರ್ಯಕರ್ತರು ಕಚೇರಿ ಮುಂದೆ ಹಾಕಿದ್ದ ಬೋರ್ಡ್ ಧ್ವಂಸಗೊಳಿಸಿದರು. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್.ಟಿ.ಮಂಜು, ದೇವರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಾರಾಯಣಗೌಡ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಕಚೇರಿಗೆ ನುಗ್ಗಲು ಯತ್ನಿಸಿದರು. ಕೂಡಲೇ ಎಚ್ಚೆತ್ತ ಪೊಲೀಸರು ಕಾರ್ಯಕರ್ತರನ್ನು ತಡೆದರು. ಇದಕ್ಕೂ ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದ ಕಾರ್ಯಕರ್ತರು ನಾರಾಯಣಗೌಡ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕರ ಕಚೇರಿ ಎದುರು ದಾಂಧಲೆ ನಡೆಸಿದ ಕಾರಣ ಕೆಆರ್ ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *